Homeಚಳವಳಿಹರಿಯಾಣ ಸಿಎಂ ವಿರುದ್ಧ ಪ್ರತಿಭಟನೆ: ರೈತ ಹೋರಾಟಗಾರರ ಮೇಲೆ ಲಾಠಿಚಾರ್ಜ್

ಹರಿಯಾಣ ಸಿಎಂ ವಿರುದ್ಧ ಪ್ರತಿಭಟನೆ: ರೈತ ಹೋರಾಟಗಾರರ ಮೇಲೆ ಲಾಠಿಚಾರ್ಜ್

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಭೇಟಿ ವಿರೋಧಿಸಿ ರೋಹ್ಟಕ್‌ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಇಬ್ಬರು ವೃದ್ಧ ರೈತರು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ರೋಹ್ಟಕ್ ನಗರದ ಹೊರವಲಯದಲ್ಲಿರುವ ಬಾಬಾ ಮಸ್ನಾಥ್ ಮಠದ ಬಳಿ ಪ್ರತಿಭಟನಾನಿರತ ರೈತರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿತ್ತು. ರೋಹ್ಟಕ್‌ನಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಕ್ರಮವನ್ನು ವಿರೋಧಿಸಿ ಜಿಂದ್ ಜಿಲ್ಲೆಯ ವಿವಿಧ ಕಡೆಗಳಲ್ಲಿ ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ, ಸ್ಥಳೀಯ ಬಿಜೆಪಿ ಸಂಸದ ಅರವಿಂದ್ ಶರ್ಮಾ ಅವರ ತಂದೆಯ ಸಂತಾಪ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ರೋಹ್ಟಕ್‌ಗೆ ಭೇಟಿ ನೀಡಿದ್ದರು. ಅವರ ಭೇಟಿ ವಿರೋಧಿಸಿ, ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನೂ ಓದಿ: ಹರಿಯಾಣ ಉಪ ಮುಖ್ಯಮಂತ್ರಿಯ ಹೆಲಿಕಾಪ್ಟರ್‌ ಇಳಿಯದಂತೆ ಘೆರಾವ್‌ ಹಾಕಿದ ರೈತರು

ಆದರೆ, ರೈತರ ಆಕ್ರಮಣಕಾರಿ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಹೆಲಿಕಾಪ್ಟರ್‌ಅನ್ನು ಸ್ಥಳೀಯ ಪೊಲೀಸ್ ಲೈನ್ಸ್‌ನಲ್ಲಿ ಇಳಿಸಲಾಗಿತ್ತು. ಬಿಗಿ ಭದ್ರತೆಯ ಮಧ್ಯೆ ಖಟ್ಟರ್ ಅವರನ್ನು ಬೇರೆ ಮಾರ್ಗದ ಮೂಲಕ ಸಂತಾಪ ಸಭೆಗೆ ಕರೆದೊಯ್ಯಲಾಗಿತ್ತು.

ಈ ಸಮಯದಲ್ಲಿ ಹೆಲಿಕಾಪ್ಟರ್‌ ಇಳಿಯುವಿಕೆಗೆ ಸ್ವಲ್ಪ ಸಮಯದ ಮೊದಲು ಕಪ್ಪು ಧ್ವಜಗಳನ್ನು ಹೊತ್ತ ಹಲವಾರು ರೈತರು ಹೆಲಿಪ್ಯಾಡ್‌ ಕಡೆಗೆ ಸಾಗುತ್ತಿದ್ದರು. ತಕ್ಷಣ ಅಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆಯಲು ಪ್ರಯತ್ನಿಸಿ, ಈ ವೇಳೆ ಘರ್ಷಣೆ ಉಂಟಾಗಿತ್ತು.

ಸಂಘಿ ಗ್ರಾಮದ ರಾಜ್ ಸಿಂಗ್ (73) ಮತ್ತು ರೋಹ್ಟಕ್ ಜಿಲ್ಲೆಯ ಬಸಂತ್‌ಪುರ್‌ ಗ್ರಾಮದ ಈಶ್ವರ್ (80) ಪೊಲೀಸ್ ಲಾಠಿಚಾರ್ಜ್ ವೇಳೆ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

ಕೃಪೆ: ದಿ ಟ್ರಿಬ್ಯೂನ್

ರೈತರ ಮೇಲಿನ ಲಾಠಿಚಾರ್ಜ್ ಖಂಡಿಸಿ, ಕಪ್ಪು ಧ್ವಜಗಳನ್ನು ಹೊತ್ತ ರೈತರು ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ್ದರಿಂದ ಸಿರ್ಸಾ ಸಂಸದೆ ಸುನೀತಾ ದುಗ್ಗಲ್ ಅವರು ಫತೇಹಾಬಾದ್ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಗುರುವಾರ ಕೂಡ ಹರಿಯಾಣದ ಉಪ ಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಹೆಲಿಕಾಪ್ಟರ್‌ ಮೂಲಕ ಹಿಸಾರ್‌ ತಲುಪಿದ್ದು, ಅವರನ್ನು ಪ್ರತಿಭಟನಾ ನಿರತ ರೈತರು ಘೆರಾವ್ ಹಾಕಿ, ಹೆಲಿಕಾಪ್ಟರ್ ಇಳಿಯಲು ಬಿಡದ ಕಾರಣ ಅದು ಬಂದ ದಾರಿಯಲ್ಲೇ ವಾಪಾಸ್ ಹೋದ ಘಟನೆ ನಡೆದಿತ್ತು.


ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಗಟ್ಟಿ ನಿರ್ಧಾರ: ಮೇ ತಿಂಗಳಿನಲ್ಲಿ ಪಾರ್ಲಿಮೆಂಟ್ ಚಲೋಗೆ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...