Homeಕರ್ನಾಟಕಮೀಟರ್ ಬಡ್ಡಿ ದಂಧೆಕೋರರ ಕಿರುಕುಳ : ತುಮಕೂರಿನಲ್ಲಿ ರೈತರ ಪ್ರತಿಭಟನೆ

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ : ತುಮಕೂರಿನಲ್ಲಿ ರೈತರ ಪ್ರತಿಭಟನೆ

- Advertisement -
- Advertisement -

ಮೀಟರ್ ಬಡ್ಡಿ ದಂಧೆ ವಿರುದ್ದ ಕ್ರಮ ಕೈಗೊಳ್ಳದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರೈತರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮೀಟರ್ ಬಡ್ಡಿ ದಂಧೆಕೋರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದರು.

ಗುಬ್ಬಿ ತಾಲೂಕಿನಲ್ಲಿ ಮೀಟರ್ ಬಡ್ಡಿ ದಂಧೆ ವ್ಯಾಪಕವಾಗಿದೆ. ಮೀಟರ್ ಬಡ್ಡಿ ದಂಧೆಕೋರರು ಸಾಲ ಪಡೆದವರಿಗೆ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಮುಂಜಾನೆ-ಸಂಜೆ ವೇಳೆ ಮನೆಗಳ ಮುಂದೆ ಬಂದು ಗಲಾಟೆ ಮಾಡುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಏನೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಸಾಲ ಪಡೆದ ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಮೀಟರ್ ಬಡ್ಡಿ ದಂಧೆಕೋರರ ಹಲ್ಲೆಗೂ ಗುರಿಯಾಗಿದ್ದಾರೆ. ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗಿ ಬಂದಿದೆ ಎಂದು ರೈತ ಮುಖಂಡ ಯೋಗೀಶ್ ತಿಳಿಸಿದರು.

ಗುಬ್ಬಿಯಿಂದ  ಆಗಿಮಿಸಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...