Homeಚಳವಳಿಕಬ್ಬಿನ ಯೋಗ್ಯ ಬೆಲೆಗೆ ಪಂಜಾಬ್ ರೈತರ ಪಟ್ಟು: 55ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ಕಬ್ಬಿನ ಯೋಗ್ಯ ಬೆಲೆಗೆ ಪಂಜಾಬ್ ರೈತರ ಪಟ್ಟು: 55ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

- Advertisement -
- Advertisement -

ಕಬ್ಬಿನ ಬೆಳೆಗೆ ಯೋಗ್ಯ ಬೆಂಬಲ ಬೆಲೆ ಒದಗಿಸಬೇಕು ಹಾಗೂ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಹಣವನ್ನು ಕೂಡಲೇ ಪಾವತಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ.

ಪಂಜಾಬ್ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕಬ್ಬು ಬೆಳೆಗಾರರ ಈ ಹೋರಾಟ 4ನೇ ದಿನಕ್ಕೆ ಕಾಲಟ್ಟಿದೆ. ದೆಹಲಿ – ಅಮೃತ್ಸರ್ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿರುವ ರೈತರು, ಹೆದ್ದಾರಿಯ ಪಕ್ಕದಲ್ಲಿರುವ ರೈಲ್ವೇ ಹಳಿಗಳ ಮೇಲೂ ಪ್ರತಿಭಟನೆ ಮುಂದುವರೆಸಿದ್ದಾರೆ.

ಕಳೆದ 4 ದಿನಗಳಿಂದ ರೈತರು ರೈಲ್ವೇ ಹಳಿಗಳ ಮೇಲೆ ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಲುಧಿಯಾನ – ಅಮೃತ್ಸರ್ ಹಾಗೂ ಲುಧಿಯಾನ – ಜಮ್ಮು ಮಾರ್ಗದ ಎಲ್ಲಾ ರೈಲು ಸಂಚಾರಗಳು ಸ್ಥಗಿತಗೊಂಡಿವೆ. ಜೊತೆಗೆ ದೆಹಲಿ ಮತ್ತು ಅಮೃತ್ಸರ್ ನಡುವಿನ ವಾಹನ ಸಂಚಾರ ಕೂಡ ಖಡಿತಗೊಂಡಿದೆ. ಆ. 20 ರಿಂದ ಈವರೆಗೆ ಲುಧಿಯಾನ ಮಾರ್ಗವಾಗಿ ಸಾಗಬೇಕಿದ್ದ 55ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ಧುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲ ದಿನಗಳ ಹಿಂದಷ್ಟೇ ಪ್ರತಿ ಕ್ವಿಂಟಾಲ್ ಕಬ್ಬಿನ ಬೆಳೆಗೆ ಕೇವಲ 15 ರೂ.ಬೆಂಬಲ ಬೆಲೆ ಹೆಚ್ಚಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿತ್ತು. ಅಂದರೆ ಪ್ರತಿ ಕ್ವಿಂಟಾಲ್ ಗೆ 350 ರೂ. ನೂತನ ದರ ನಿಗದಿಗೊಳಿಸಿ ಸರ್ಕಾರ ಆದೇಶಿಸಿತ್ತು.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಬೀದಿಗಿಳಿದ ಪಂಜಾಬ್ ರೈತರು, ರಸ್ತೆ ತಡೆ ರೈಲು ತಡೆ ಆರಂಭಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 400 ರೂ. ಗಳಷ್ಟು ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯದ ವಿವಿದೆಡೆಗಳಲ್ಲಿ ಹೋರಾಟ ತೀವ್ರಗೊಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಲೇ ಎಚ್ಚೆತ್ತುಕೊಂಡ ಪಂಜಾಬ್ ಸರ್ಕಾರದ ಸಹಕಾರ ಸಚಿವ ಸುಖ್ಜಿಂದರ್ ರಂಧಾವಾ, ರೈತರಿಗೆ ಪಾವತಿಸಬೇಕಿರುವ ಬಾಕಿ ಹಣದಲ್ಲಿ 45 ಕೋಟಿ ರೂಪಾಯಿಗಳನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಆದರೆ, ಪಂಜಾಬಿನ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಶುಗರ್ ಫ್ಯಾಕ್ಟರಿಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ ಮೊತ್ತ ಒಟ್ಟು 450 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಸಚಿವರ ಜೊತೆಗಿನ ಚರ್ಚೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗದ ಕಾರಣ ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದು, ಬೇಡಿಕೆ ಈಡೇರುವ ವರೆಗೆ ಅನಿರ್ಧಿಷ್ಟಾವಧಿ‌ ಧರಣಿ ಕೂರುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...