Homeಚಳವಳಿಕಬ್ಬಿನ ಯೋಗ್ಯ ಬೆಲೆಗೆ ಪಂಜಾಬ್ ರೈತರ ಪಟ್ಟು: 55ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ಕಬ್ಬಿನ ಯೋಗ್ಯ ಬೆಲೆಗೆ ಪಂಜಾಬ್ ರೈತರ ಪಟ್ಟು: 55ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

- Advertisement -
- Advertisement -

ಕಬ್ಬಿನ ಬೆಳೆಗೆ ಯೋಗ್ಯ ಬೆಂಬಲ ಬೆಲೆ ಒದಗಿಸಬೇಕು ಹಾಗೂ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಹಣವನ್ನು ಕೂಡಲೇ ಪಾವತಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ.

ಪಂಜಾಬ್ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕಬ್ಬು ಬೆಳೆಗಾರರ ಈ ಹೋರಾಟ 4ನೇ ದಿನಕ್ಕೆ ಕಾಲಟ್ಟಿದೆ. ದೆಹಲಿ – ಅಮೃತ್ಸರ್ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿರುವ ರೈತರು, ಹೆದ್ದಾರಿಯ ಪಕ್ಕದಲ್ಲಿರುವ ರೈಲ್ವೇ ಹಳಿಗಳ ಮೇಲೂ ಪ್ರತಿಭಟನೆ ಮುಂದುವರೆಸಿದ್ದಾರೆ.

ಕಳೆದ 4 ದಿನಗಳಿಂದ ರೈತರು ರೈಲ್ವೇ ಹಳಿಗಳ ಮೇಲೆ ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಲುಧಿಯಾನ – ಅಮೃತ್ಸರ್ ಹಾಗೂ ಲುಧಿಯಾನ – ಜಮ್ಮು ಮಾರ್ಗದ ಎಲ್ಲಾ ರೈಲು ಸಂಚಾರಗಳು ಸ್ಥಗಿತಗೊಂಡಿವೆ. ಜೊತೆಗೆ ದೆಹಲಿ ಮತ್ತು ಅಮೃತ್ಸರ್ ನಡುವಿನ ವಾಹನ ಸಂಚಾರ ಕೂಡ ಖಡಿತಗೊಂಡಿದೆ. ಆ. 20 ರಿಂದ ಈವರೆಗೆ ಲುಧಿಯಾನ ಮಾರ್ಗವಾಗಿ ಸಾಗಬೇಕಿದ್ದ 55ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ಧುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲ ದಿನಗಳ ಹಿಂದಷ್ಟೇ ಪ್ರತಿ ಕ್ವಿಂಟಾಲ್ ಕಬ್ಬಿನ ಬೆಳೆಗೆ ಕೇವಲ 15 ರೂ.ಬೆಂಬಲ ಬೆಲೆ ಹೆಚ್ಚಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿತ್ತು. ಅಂದರೆ ಪ್ರತಿ ಕ್ವಿಂಟಾಲ್ ಗೆ 350 ರೂ. ನೂತನ ದರ ನಿಗದಿಗೊಳಿಸಿ ಸರ್ಕಾರ ಆದೇಶಿಸಿತ್ತು.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಬೀದಿಗಿಳಿದ ಪಂಜಾಬ್ ರೈತರು, ರಸ್ತೆ ತಡೆ ರೈಲು ತಡೆ ಆರಂಭಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 400 ರೂ. ಗಳಷ್ಟು ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯದ ವಿವಿದೆಡೆಗಳಲ್ಲಿ ಹೋರಾಟ ತೀವ್ರಗೊಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಲೇ ಎಚ್ಚೆತ್ತುಕೊಂಡ ಪಂಜಾಬ್ ಸರ್ಕಾರದ ಸಹಕಾರ ಸಚಿವ ಸುಖ್ಜಿಂದರ್ ರಂಧಾವಾ, ರೈತರಿಗೆ ಪಾವತಿಸಬೇಕಿರುವ ಬಾಕಿ ಹಣದಲ್ಲಿ 45 ಕೋಟಿ ರೂಪಾಯಿಗಳನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಆದರೆ, ಪಂಜಾಬಿನ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಶುಗರ್ ಫ್ಯಾಕ್ಟರಿಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ ಮೊತ್ತ ಒಟ್ಟು 450 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಸಚಿವರ ಜೊತೆಗಿನ ಚರ್ಚೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗದ ಕಾರಣ ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದು, ಬೇಡಿಕೆ ಈಡೇರುವ ವರೆಗೆ ಅನಿರ್ಧಿಷ್ಟಾವಧಿ‌ ಧರಣಿ ಕೂರುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...