Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...