Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...