Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...