Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...