Homeಮುಖಪುಟರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

"ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ"

- Advertisement -
- Advertisement -

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯುತ್ತಿದ್ದಾರೆ. ಇತ್ತೀಚೆಗೆ ಕರ್ನಾಲ್‌ ಸಮೀಪದ ಗ್ರಾಮವೊಂದರಲ್ಲಿ ಹರಿಯಾಣ ಮುಖ್ಯಮಂತ್ರಿ ತನ್ನ ಸಭೆಯನ್ನು ಕೂಡಾ ರದ್ದುಪಡಿಸಿದ್ದರು.

ಈ ಹಿನ್ನೆಲೆಯಲ್ಲಿ “ಮುಂದಿನ ಆದೇಶದವರೆಗೆ ಹರಿಯಾಣ ರಾಜ್ಯದಲ್ಲಿ  ಕೃಷಿ ಕಾಯ್ದೆ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ” ಎಂದು ಆದೇಶ ಹೊರಡಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಕರ್ನಾಲಲ್‌ನಲ್ಲಿ ಮುಖ್ಯಮಂತ್ರಿಯವರ ಭೇಟಿಗೆ ತೀವ್ರ ವಿರೋಧ ವ್ಯಕ್ತವಾಗಿ ಅದು ಅತೀರೇಕಕ್ಕೇರಿತ್ತು. ನಂತರ ಮುಖ್ಯಮಂತ್ರಿ ತಮ್ಮ ಭೇಟಿಯನ್ನೇ ರದ್ದುಪಡಿಸಿದರು. ಈ ಕಾರಣದಿಂದಾಗಿ ಯಾವುದೇ ಕೃಷಿ ಕಾಯ್ದೆ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಡಿ ಎಂದು ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ. ನಮಗೆ ರೈತರೊಂದಿಗಿನ ಮುಖಾಮುಖಿ ಇಷ್ಟವಿಲ್ಲ ಎಂದು ಹರಿಯಾಣದ ಶಿಕ್ಷಣ ಸಚಿವ ಕನ್ವರ್‌ ಪಾಲ್‌ ಗುಜ್ಜರ್‌ ಹೇಳಿದ್ದಾರೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

“ಕಾರ್ಯಕ್ರಮದ ಸ್ಥಳದಲ್ಲಿ ರೈತರು ಹೇಗೆ ವರ್ತಿಸಿದ್ದಾರೆ ಎಂಬುದನ್ನು ನಾವು ಹೇಳಬೇಕಾಗಿಲ್ಲ. ಕುರ್ಚಿಗಳನ್ನು ಎಸೆದು ವೇದಿಕೆಯನ್ನು ಹಾಳುಗೆಡವಿ, ಮುಖ್ಯಮಂತ್ರಿಗಳ ಹೆಲಿಕಾಪ್ಟರ್‌ ಲ್ಯಾಂಡ್‌ ಆಗಲು ಕೂಡಾ ಅನುಮತಿಸಿಲ್ಲ” ಎಂದು ಆರೋಪಿಸಿದರು.

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಜನವರಿ 10 ರಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇದನ್ನೂ ಓದಿ: ಹರಿಯಾಣ ಸಿಎಂ ಕರ್ನಾಲ್ ಭೇಟಿ ವೇಳೆ ರೈತರ ಮೇಲೆ ಮತ್ತೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...