Homeಮುಖಪುಟರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

"ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ"

- Advertisement -
- Advertisement -

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯುತ್ತಿದ್ದಾರೆ. ಇತ್ತೀಚೆಗೆ ಕರ್ನಾಲ್‌ ಸಮೀಪದ ಗ್ರಾಮವೊಂದರಲ್ಲಿ ಹರಿಯಾಣ ಮುಖ್ಯಮಂತ್ರಿ ತನ್ನ ಸಭೆಯನ್ನು ಕೂಡಾ ರದ್ದುಪಡಿಸಿದ್ದರು.

ಈ ಹಿನ್ನೆಲೆಯಲ್ಲಿ “ಮುಂದಿನ ಆದೇಶದವರೆಗೆ ಹರಿಯಾಣ ರಾಜ್ಯದಲ್ಲಿ  ಕೃಷಿ ಕಾಯ್ದೆ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ” ಎಂದು ಆದೇಶ ಹೊರಡಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಕರ್ನಾಲಲ್‌ನಲ್ಲಿ ಮುಖ್ಯಮಂತ್ರಿಯವರ ಭೇಟಿಗೆ ತೀವ್ರ ವಿರೋಧ ವ್ಯಕ್ತವಾಗಿ ಅದು ಅತೀರೇಕಕ್ಕೇರಿತ್ತು. ನಂತರ ಮುಖ್ಯಮಂತ್ರಿ ತಮ್ಮ ಭೇಟಿಯನ್ನೇ ರದ್ದುಪಡಿಸಿದರು. ಈ ಕಾರಣದಿಂದಾಗಿ ಯಾವುದೇ ಕೃಷಿ ಕಾಯ್ದೆ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಡಿ ಎಂದು ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ. ನಮಗೆ ರೈತರೊಂದಿಗಿನ ಮುಖಾಮುಖಿ ಇಷ್ಟವಿಲ್ಲ ಎಂದು ಹರಿಯಾಣದ ಶಿಕ್ಷಣ ಸಚಿವ ಕನ್ವರ್‌ ಪಾಲ್‌ ಗುಜ್ಜರ್‌ ಹೇಳಿದ್ದಾರೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

“ಕಾರ್ಯಕ್ರಮದ ಸ್ಥಳದಲ್ಲಿ ರೈತರು ಹೇಗೆ ವರ್ತಿಸಿದ್ದಾರೆ ಎಂಬುದನ್ನು ನಾವು ಹೇಳಬೇಕಾಗಿಲ್ಲ. ಕುರ್ಚಿಗಳನ್ನು ಎಸೆದು ವೇದಿಕೆಯನ್ನು ಹಾಳುಗೆಡವಿ, ಮುಖ್ಯಮಂತ್ರಿಗಳ ಹೆಲಿಕಾಪ್ಟರ್‌ ಲ್ಯಾಂಡ್‌ ಆಗಲು ಕೂಡಾ ಅನುಮತಿಸಿಲ್ಲ” ಎಂದು ಆರೋಪಿಸಿದರು.

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಜನವರಿ 10 ರಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇದನ್ನೂ ಓದಿ: ಹರಿಯಾಣ ಸಿಎಂ ಕರ್ನಾಲ್ ಭೇಟಿ ವೇಳೆ ರೈತರ ಮೇಲೆ ಮತ್ತೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...