Homeಮುಖಪುಟರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

- Advertisement -
- Advertisement -

ಪಂಜಾಬ್ ಹರಿಯಾಣ ಸೇರಿದಂತೆ ದೇಶದ 250 ಸ್ಥಳಗಳಲ್ಲಿ ರೈತರು ಶನಿವಾರ ಕ್ರಾಂತಿದಿನವನ್ನು ಆಚರಿಸಿದ್ದಾರೆ.  ಸಂಯುಕ್ತ ಕಿಸಾನ್‌ ಮೋರ್ಚಾ (SKM) ರೈತ ಸಂಘಟನೆಯ ಅಡಿಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹರಿಯಾಣ ಉಪ ಮುಖ್ಯಮಂತ್ರಿ ದುಶ್ಯಂತ್‌ ಸಿಂಗ್‌ ಚೌಟಾಲ ಮತ್ತು ಇತರ ಬಿಜೆಪಿ ನಾಯಕರ ಮನೆ ಮುಂದೆ ಸರ್ಕಾರದ ರೈತ ವಿರೋಧಿ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ವಿವಾದಾತ್ಮಕ  ಕೃಷಿ ಸುಗ್ರೀವಾಜ್ಞೆಗಳನ್ನು ಹೊರಡಿಸಿ  ಜೂನ್‌ 5 ಕ್ಕೆ ಒಂದು ವರ್ಷ ತುಂಬಿದೆ. ರೈತ ಹೋರಾಟ ಮತ್ತು ರೈತ ವಿರೋಧಿ ಕಾನೂನಿಗೆ ಒಂದು ವರ್ಷ ಕಳೆದ ಸಂದರ್ಭದಲ್ಲಿ ರೈತರು ತಮ್ಮ ಪ್ರತಿಭಟನೆಗಳನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಪಂಜಾಬ್‌ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆಗಳು ಮತ್ತೆ ತೀವ್ರ ಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ವರ್ಷ ಅಂದರೆ 2020 ರ ಜೂನ್‌ 6 ರಂದು ರೈತರ ಮೊದಲ ಪ್ರತಿಭಟನೆ ನಡೆದಿತ್ತು.

2020 ರ ಅಕ್ಟೋಬರ್‌ 1 ರಿಂದ ಪಂಜಾಬ್‌ನಲ್ಲಿ ರೈತರು ಪ್ರತಿಭಟನೆಯನ್ನು ಆರಂಭಿಸಿದ್ದರು. ನಂತರ ನವೆಂಬರ್‌ 26 ರಿಂದ ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿತ್ತು.

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

ಕಳೆದ ವರ್ಷ ಜೂನ್‌ 14 ರಿಂದ ಜೂನ್‌ 30 ರ ವರೆಗೆ ನಮ್ಮ ಸಾವಿರಾರು ರೈತರು ತಮ್ಮ ಮನೆಯ ಮಹಡಿಯ ಮೇಲೆ ಭಿತ್ತಿ ಪತ್ರ ಹಿಡಿದು ನಿಂತು ಪ್ರತಿಭಟನೆ ನಡೆಸಿದ್ದರು. ಆಗ ರಾಜ್ಯದಲ್ಲಿ ಕರ್ಪ್ಯೂ ಜಾರಿ ಮಾಡಲಾಗಿತ್ತು. ನಮ್ಮ ಬಹಿರಂಗ ಪ್ರತಿಭಟನೆಗೆ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಬಿಕೆಯು ರಾಷ್ಟ್ರೀಯ ಕಾರ್ಯದರ್ಶಿ ಸುಖದೇವ್‌ ಸಿಂಗ್‌ ಕೋಕ್ರಿ ಹಿಂದಿನ ವರ್ಷದ ಘಟನೆಯನ್ನು ನೆನೆಸಿಕೊಂಡಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ನಾವು ನಿಧಾನಕ್ಕೆ ಹಳ್ಳಿಗಳಲ್ಲಿ ಪ್ರತಿಭಟನೆಯನ್ನು ನಡೆಸಲು ಆರಂಭಿಸಿದೆವು. ನಿಧಾನಕ್ಕೆ ಅದು ಟ್ರಾಕ್ಟರ್‌ ಪರೇಡ್‌, ಜೈಲ್ ಭರೋ ಆಂದೋಲನ, ರೈಲ್‌ ರೋಖೋ ಅಭಿಯಾನವಾಗಿ ಬೆಳೆಯಿತು ಎಂದು ಸುಖದೇವ್‌ ಸಿಂಗ್‌ ಕೋಕ್ರಿ ಕಳೆದ ವರ್ಷದ ಪ್ರತಿಭಟನೆ ಹೇಗೆ ಆರಂಭವಾಯಿತು ಎಂದು ತಿಳಿಸಿದ್ದಾರೆ.

ಜೂನ್‌ 5 ಶನಿವಾರ ರೈತರು ಅನೇಕ ಬಿಜೆಪಿ ಎಂಪಿ, ಎಮ್‌ಎಲ್‌ಎಗಳ ಮನೆ ಮುಂದೆ ರೈತ ವಿರೋಧಿ ಕಾನೂನುಗಳನ್ನು ಸುಡುವ ಮೂಲಕ ಪಂಜಾಬ್‌ ಹರಿಯಾಣ ಮೂಲದ ಬಿಜೆಪಿ ನಾಯಕರುಗಳಿಗೆ ಕೊನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಪಂಜಾಬ್‌ನ ಬಿಜೆಪಿ ನಾಯಕರ ಮನೆ ಮುಂದೆ ರೈತರ ಪ್ರತಿಭಟನೆ

2021 ರ ಮೇ 26 ಬುಧವಾರದಂದು ರೈತರು ದೇಶಾದ್ಯಂತ ಕರಾಳ ದಿನವನ್ನು ಆಚರಿಸಿದ್ದರು. ಗಾಝಿಪುರ್‌, ಸಿಂಘು, ಟಿಕ್ರಿ ಗಡಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪಂಜಾಬ್‌ ನ ರೈತರು ತಮ್ಮ ಮನೆಗಳ ಛಾವಣಿ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ಲಾಕ್‌ಡೌನ್‌ ನಡುವೆಯೂ ಕೇಂದ್ರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...