Homeಮುಖಪುಟರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

- Advertisement -
- Advertisement -

ಪಂಜಾಬ್ ಹರಿಯಾಣ ಸೇರಿದಂತೆ ದೇಶದ 250 ಸ್ಥಳಗಳಲ್ಲಿ ರೈತರು ಶನಿವಾರ ಕ್ರಾಂತಿದಿನವನ್ನು ಆಚರಿಸಿದ್ದಾರೆ.  ಸಂಯುಕ್ತ ಕಿಸಾನ್‌ ಮೋರ್ಚಾ (SKM) ರೈತ ಸಂಘಟನೆಯ ಅಡಿಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹರಿಯಾಣ ಉಪ ಮುಖ್ಯಮಂತ್ರಿ ದುಶ್ಯಂತ್‌ ಸಿಂಗ್‌ ಚೌಟಾಲ ಮತ್ತು ಇತರ ಬಿಜೆಪಿ ನಾಯಕರ ಮನೆ ಮುಂದೆ ಸರ್ಕಾರದ ರೈತ ವಿರೋಧಿ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ವಿವಾದಾತ್ಮಕ  ಕೃಷಿ ಸುಗ್ರೀವಾಜ್ಞೆಗಳನ್ನು ಹೊರಡಿಸಿ  ಜೂನ್‌ 5 ಕ್ಕೆ ಒಂದು ವರ್ಷ ತುಂಬಿದೆ. ರೈತ ಹೋರಾಟ ಮತ್ತು ರೈತ ವಿರೋಧಿ ಕಾನೂನಿಗೆ ಒಂದು ವರ್ಷ ಕಳೆದ ಸಂದರ್ಭದಲ್ಲಿ ರೈತರು ತಮ್ಮ ಪ್ರತಿಭಟನೆಗಳನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಪಂಜಾಬ್‌ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆಗಳು ಮತ್ತೆ ತೀವ್ರ ಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ವರ್ಷ ಅಂದರೆ 2020 ರ ಜೂನ್‌ 6 ರಂದು ರೈತರ ಮೊದಲ ಪ್ರತಿಭಟನೆ ನಡೆದಿತ್ತು.

2020 ರ ಅಕ್ಟೋಬರ್‌ 1 ರಿಂದ ಪಂಜಾಬ್‌ನಲ್ಲಿ ರೈತರು ಪ್ರತಿಭಟನೆಯನ್ನು ಆರಂಭಿಸಿದ್ದರು. ನಂತರ ನವೆಂಬರ್‌ 26 ರಿಂದ ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿತ್ತು.

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

ಕಳೆದ ವರ್ಷ ಜೂನ್‌ 14 ರಿಂದ ಜೂನ್‌ 30 ರ ವರೆಗೆ ನಮ್ಮ ಸಾವಿರಾರು ರೈತರು ತಮ್ಮ ಮನೆಯ ಮಹಡಿಯ ಮೇಲೆ ಭಿತ್ತಿ ಪತ್ರ ಹಿಡಿದು ನಿಂತು ಪ್ರತಿಭಟನೆ ನಡೆಸಿದ್ದರು. ಆಗ ರಾಜ್ಯದಲ್ಲಿ ಕರ್ಪ್ಯೂ ಜಾರಿ ಮಾಡಲಾಗಿತ್ತು. ನಮ್ಮ ಬಹಿರಂಗ ಪ್ರತಿಭಟನೆಗೆ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಬಿಕೆಯು ರಾಷ್ಟ್ರೀಯ ಕಾರ್ಯದರ್ಶಿ ಸುಖದೇವ್‌ ಸಿಂಗ್‌ ಕೋಕ್ರಿ ಹಿಂದಿನ ವರ್ಷದ ಘಟನೆಯನ್ನು ನೆನೆಸಿಕೊಂಡಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ನಾವು ನಿಧಾನಕ್ಕೆ ಹಳ್ಳಿಗಳಲ್ಲಿ ಪ್ರತಿಭಟನೆಯನ್ನು ನಡೆಸಲು ಆರಂಭಿಸಿದೆವು. ನಿಧಾನಕ್ಕೆ ಅದು ಟ್ರಾಕ್ಟರ್‌ ಪರೇಡ್‌, ಜೈಲ್ ಭರೋ ಆಂದೋಲನ, ರೈಲ್‌ ರೋಖೋ ಅಭಿಯಾನವಾಗಿ ಬೆಳೆಯಿತು ಎಂದು ಸುಖದೇವ್‌ ಸಿಂಗ್‌ ಕೋಕ್ರಿ ಕಳೆದ ವರ್ಷದ ಪ್ರತಿಭಟನೆ ಹೇಗೆ ಆರಂಭವಾಯಿತು ಎಂದು ತಿಳಿಸಿದ್ದಾರೆ.

ಜೂನ್‌ 5 ಶನಿವಾರ ರೈತರು ಅನೇಕ ಬಿಜೆಪಿ ಎಂಪಿ, ಎಮ್‌ಎಲ್‌ಎಗಳ ಮನೆ ಮುಂದೆ ರೈತ ವಿರೋಧಿ ಕಾನೂನುಗಳನ್ನು ಸುಡುವ ಮೂಲಕ ಪಂಜಾಬ್‌ ಹರಿಯಾಣ ಮೂಲದ ಬಿಜೆಪಿ ನಾಯಕರುಗಳಿಗೆ ಕೊನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಪಂಜಾಬ್‌ನ ಬಿಜೆಪಿ ನಾಯಕರ ಮನೆ ಮುಂದೆ ರೈತರ ಪ್ರತಿಭಟನೆ

2021 ರ ಮೇ 26 ಬುಧವಾರದಂದು ರೈತರು ದೇಶಾದ್ಯಂತ ಕರಾಳ ದಿನವನ್ನು ಆಚರಿಸಿದ್ದರು. ಗಾಝಿಪುರ್‌, ಸಿಂಘು, ಟಿಕ್ರಿ ಗಡಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪಂಜಾಬ್‌ ನ ರೈತರು ತಮ್ಮ ಮನೆಗಳ ಛಾವಣಿ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ಲಾಕ್‌ಡೌನ್‌ ನಡುವೆಯೂ ಕೇಂದ್ರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...