Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...