Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...