Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...