Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...