Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...