HomeUncategorizedರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ - ಸುಖ್‌ಬೀರ್ ಸಿಂಗ್

ರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ – ಸುಖ್‌ಬೀರ್ ಸಿಂಗ್

"ಎನ್‌ಡಿಎ ಸರ್ಕಾರವು ಫೆಡರಲಿಸಂ ಅನ್ನು ಮಾತ್ರವಲ್ಲದೆ ಪ್ರತಿಭಟಿಸುವ ಸ್ವಾತಂತ್ರ್ಯವನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇವರ ಪರವಾಗಿರುವವರನ್ನು ದೇಶಭಕ್ತರು ಎಂಬಂತೆ, ವಿರುದ್ಧವಾಗಿರುವವರು ದೇಶ ದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ ಎಂದು ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದ್ದು, ಪರೋಕ್ಷವಾಗಿ ಬಿಜೆಪಿ-ಎನ್‌ಡಿಎ ಸರ್ಕಾರವನ್ನು ದೂರಿದ್ದಾರೆ.

“ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ. ಇದು ಈಗಾಗಲೇ ದೆಹಲಿಯಲ್ಲಿ ಪ್ರಾರಂಭವಾಗಿದೆ. ಈಗ ಇದನ್ನು ಪಂಜಾಬ್‌ನಲ್ಲಿ ಪುನರಾವರ್ತಿಸಲು ಬಯಸುತ್ತಿವೆ. ಅಕಾಲಿ ದಳವು ಶಾಂತಿ ಮತ್ತು ಕೋಮು ಸಹೋದರತ್ವವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ” ಎಂದು ಅಮೃತಸರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸುಖ್‌ಬೀರ್ ಸಿಂಗ್ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

“ಎನ್‌ಡಿಎ ಸರ್ಕಾರವು ಫೆಡರಲಿಸಂ ಅನ್ನು ಮಾತ್ರವಲ್ಲದೆ ಪ್ರತಿಭಟಿಸುವ ಸ್ವಾತಂತ್ರ್ಯವನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇವರ ಪರವಾಗಿರುವವರನ್ನು ದೇಶಭಕ್ತರು ಎಂಬಂತೆ, ವಿರುದ್ಧವಾಗಿರುವವರು ದೇಶ ದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ” ಎಂದು ಆರೋಪಿಸಿದರು.

“ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕೇಂದ್ರ ಸಚಿವಾಲಯಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಕೌರ್ ಬಾದಲ್ ದೇಶ ದ್ರೋಹಿಯೇ? ತನ್ನ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್ ದೇಶದ್ರೋಹಿಯೇ? ಇವರನ್ನು ದೇಶದ್ರೋಹಿ ಎಂದು ಯಾರಾದರೂ ಹೇಳಬಹುದೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

“ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಸಮರ್ಥನೆಯನ್ನು ರೈತರು ಒಪ್ಪದ ಕಾರಣ ಅವರನ್ನು ಉಗ್ರಗಾಮಿಗಳು ಎಂದು ಬಿಂಬಿಸಲಾಯಿತು. ಅಕಾಲಿ ದಳವು ಒಕ್ಕೂಟ ವ್ಯವಸ್ಥೆಯ ಬಗ್ಗೆ ದನಿಯೆತ್ತಿದಾಗ ಪ್ರತ್ಯೇಕತಾವಾದಿಗಳು ಎಂದು ಬ್ರಾಂಡ್ ಮಾಡಲಾಯಿತು” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಅದೇ ಸ್ಥಳದಲ್ಲಿದ್ದ ಹರ್ಸಿಮ್ರತ್ ಕೌರ್ ಬಾದಲ್ ಮಾತನಾಡಿ, “ಸರ್ಕಾರದ ಪ್ರಸ್ತಾವಗಳಿಗೆ ಒಪ್ಪದ ಕಾರಣ ರೈತರನ್ನು ನಕ್ಸಲೈಟ್ ಮತ್ತು ಭಯೋತ್ಪಾದಕರು ಎಂದು ಕರೆಯುತ್ತಿರುವುದು ದುರದೃಷ್ಟಕರ. ಇಂತಹ ತಂತ್ರಗಳು ಕೇಂದ್ರಕ್ಕೆ ಸಹಾಯ ಮಾಡುವುದಿಲ್ಲ” ಎಂದು ಹೇಳಿದರು.


ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...