Homeಮುಖಪುಟರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ - ಬಿಜೆಪಿ ನಾಯಕರಲ್ಲಿ ಅಸಮಾಧಾನ

ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

"ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು" ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವು ರೈತ ಪ್ರತಿಭಟನೆಯ ವಿಶ್ವಾಸಾರ್ಹತೆಯನ್ನು ಕುಂದುವಂತೆ ಮಾಡಿತ್ತು. ಗಾಜಿಪುರದಲ್ಲಿ ಕೃಷಿ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೈಗೊಂಡ ಕ್ರಮವು ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಿದೆ” ಎಂದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಆಡಳಿತ ಪಕ್ಷದ ಹಲವಾರು ಹಿರಿಯ ನಾಯಕರು, ಬಿಜೆಪಿ ಸಂಸದರು ತಿಳಿಸಿದ್ದಾರೆ.

ಬಿಕೆಯು ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಹೊರಹಾಕಲು ಗುರುವಾರ ರಾತ್ರಿ ಭಾರಿ ಪೊಲೀಸ್ ನಿಯೋಜನೆ ಮಾಡಿದ್ದು ರೈತರ ಭಾವನೆಗಳನ್ನು ಕೆರಳಿಸಿದೆ. ಅದರಲ್ಲೂ ವಿಶೇಷವಾಗಿ ಜಾಟ್ ಸಮುದಾಯದ ರೈತರು ಆಕ್ರೋಶಗೊಂಡಿದ್ದಾರೆ. ಪಶ್ಚಿಮ ಯುಪಿ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜಾಟ್ ಸಮುದಾಯವು ಗಮನಾರ್ಹ ರಾಜಕೀಯ ಮಹತ್ವವನ್ನು ಹೊಂದಿದೆ.

ಮುಜಫರ್‌ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಶುಕ್ರವಾರ ಭಾರಿ ಜನಸಂದಣಿ ಈ ಮನಸ್ಥಿತಿಯನ್ನು ಪ್ರತಿಬಿಂಬಿಸಿತು. “ಇದು 2013 ರಲ್ಲಿ ಕೋಮು ಗಲಭೆಗೆ ಸಂಬಂಧಿಸಿ ಬಿಜೆಪಿ ನಡೆಸಿದ ಸಭೆಗಿಂತ ದೊಡ್ಡದಾಗಿತ್ತು” ಎಂದು ಪಶ್ಚಿಮ ಯುಪಿಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರತಿಭಟನಾಕಾರರನ್ನು ತೆರವುಗೊಳಿಸುವ ಪೋಲಿಸ್ ನಡೆಯನ್ನು ವಿರೋಧಿಸಿ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿಯ ನಂತರ ಹೊಸದಾಗಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗೆ ಸೇರುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪಶ್ಚಿಮ ಯುಪಿಯ ಬಿಜೆಪಿ ಮುಖಂಡರು, “ಟಿಕಾಯತ್ ಅಳುವ ದೃಶ್ಯಗಳು ಜಾಟ್ ಸಮುದಾಯವನ್ನು ಕಲಕಿದೆ. ನಮ್ಮ ಮಗ ಅಳುತ್ತಿದ್ದಾನೆ, ನಾವು ಹೋಗೋಣ ಮತ್ತು ಬೆಂಬಲಿಸೋಣ ಎಂಬ ಭಾವನೆಯನ್ನು ಮೂಡಿಸಿದೆ. ಇದು ಹಳ್ಳಿಗಳಿಂದ ಅನೇಕರನ್ನು ಪ್ರತಿಭಟನಾ ಸ್ಥಳದ ಕಡೆಗೆ ಮೆರವಣಿಗೆ ಮಾಡಲು ಪ್ರೇರೇಪಿಸಿದೆ” ಎಂದು ಹೇಳಿದ್ದಾರೆ.

ಯುಪಿ ಸರ್ಕಾರ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಿದೆ ಎಂದು ಈ ಪ್ರದೇಶದ ಪಕ್ಷದ ಕೆಲವು ಬಿಜೆಪಿ ಸಂಸದರು ದೂಷಿಸಿದ್ದಾರೆ. “ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನಕ್ಕೆ ಪ್ರಚೋದನೆ ನೀಡಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು. ಯುಪಿ ಸರ್ಕಾರದ ಪೊಲೀಸ್ ಕ್ರಮವು ಪಕ್ಷವನ್ನು ಒಂದು ಅನಿಶ್ಚಿತ ಪರಿಸ್ಥಿತಿಯಲ್ಲಿ ಇರಿಸಿದೆ” ಎಂದು ಬಿಜೆಪಿ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರಿಯಾಣದಲ್ಲಿ, ಪಕ್ಷಾತೀತವಾಗಿ ಹಲವಾರು ಸ್ಥಳೀಯ ಜಾಟ್ ನಾಯಕರು ಟಿಕಾಯತ್ ಅವರನ್ನು ಬೆಂಬಲಿಸಿ ಘಾಜಿಪುರದ ಕಡೆಗೆ ಮೆರವಣಿಗೆ ಆರಂಭಿಸಿದ್ದಾರೆ. ಮತ್ತು ಇತರ ಗಡಿ ಪ್ರತಿಭಟನಾ ತಾಣಗಳಾದ ಸಿಂಘು ಮತ್ತು ಟಿಕ್ರಿ ಗಡಿಗಳತ್ತಲೂ ಹೊರಟಿದ್ದಾರೆ.

“ಐಎನ್‌ಎಲ್‌ಡಿ ಶಾಸಕ ಅಭಯ್ ಚೌಟಾಲ ರೈತರನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಸಂಬಂಧಿ ದುಶ್ಯಂತ್ ಚೌಟಾಲ ಅವರ ಮೇಲೆ ಹೆಚ್ಚಿನ ರಾಜಕೀಯ ಒತ್ತಡವನ್ನು ಉಂಟುಮಾಡಬಹುದು” ಎಂದು ಕೆಲವು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಉಪ ಮುಖ್ಯಮಂತ್ರಿ ದುಷ್ಯಂತ್ ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಪಿಪಿ ಮುಖ್ಯಸ್ಥರಾಗಿದ್ದಾರೆ. ಬಿಜೆಪಿ 90 ಸ್ಥಾನಗಳಲ್ಲಿ 40 ಸ್ಥಾನಗಳನ್ನು ಹೊಂದಿದ್ದು, ದುಶ್ಯಂತ್ ಚೌಟಾಲ್ ಮತ್ತು ಅವರ 10 ಶಾಸಕರು ಅಧಿಕಾರದ ಕೀಲಿಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಹಿಂಸಾಚಾರ ಮತ್ತು ಯುಪಿ ಸರ್ಕಾರದ ತೆರವುಗೊಳಿಸುವ ನಡೆಯನ್ನು ಉಲ್ಲೇಖಿಸಿದ ಬಿಜೆಪಿ ಜನಪ್ರತಿನಿಧಿಯೊಬ್ಬರು, ನಮ್ಮ ಕ್ಷೇತ್ರಗಳಲ್ಲಿನ ಜನರಿಗೆ ನಾವು ಏನು ಹೇಳೋಣ? ಈ ಹಿಂಸಾಚಾರವು ರೈತರ ಐಕ್ಯತೆಯನ್ನು ಮುರಿಯಲು ಮತ್ತು ಚಳವಳಿಯನ್ನು ಕೆಣಕಲು ಸರ್ಕಾರ ನಡೆಸಿದ ಕುತಂತ್ರವಾಗಿದೆ ಎಂದು ಅನೇಕ ನಗರ ಪ್ರದೇಶಗಳಲ್ಲಿ ಜನರು ಹೇಳುತ್ತಿದ್ದಾರೆ. ಗಡಿಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ಏಕೆ ಈ ಕ್ರಮ ಕೈಗೊಳ್ಳಬೇಕಾಯಿತು ಎಂದು ಹಳ್ಳಿಗಳ ಜನರು ಕೇಳುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹರಿಯಾಣ ಬಿಜೆಪಿ ಸಂಸದರೊಬ್ಬರು, “ವಾಸ್ತವದಲ್ಲಿ ಪೊಲೀಸ್ ಕ್ರಮವು ಹರಿಯಾಣದಲ್ಲಿನ ರೈತರ ಆಂದೋಲನವನ್ನು ಇನ್ನಷ್ಟು ಹುರುಪುಗೊಳಿಸಲು ಪ್ರತಿಭಟನಾಕಾರರಿಗೆ ಒಂದು ಅವಕಾಶ ಸಿಕ್ಕಂತಾಗಿದೆ. ಇದು ಇಲ್ಲಿಯವರೆಗೆ ಪಂಜಾಬ್ ಆಂದೋಲನವಾಗಿ ಉಳಿದಿತ್ತು, ಆದರೆ ಈಗ ಅದು ಹಾಗೇ ಉಳಿದಿಲ್ಲ” ಎಂದು ಹೇಳಿದ್ದಾರೆ.

ಟಿಕಾಯತ್ ಅವರ ಮನವಿಯು ಯುಪಿಯ ಶುಗರ್ ಬೆಲ್ಟ್‌ನಲ್ಲಿ ಕುಟುಂಬದ ರಾಜಕೀಯ ಪರಂಪರೆಯಿಂದಾಗಿ ವಿಶೇಷ ಮಹತ್ವ ಹೊಂದಿದೆ. ದಿವಂಗತ ಮಹೇಂದ್ರ ಸಿಂಗ್ ಟಿಕಾಯತ್ ಪಶ್ಚಿಮ ಯುಪಿಯಲ್ಲಿ ಕಟ್ಟಿದ ರೈತ ಚಳವಳಿ ಇದಕ್ಕೆ ಕಾರಣವಾಗಿದೆ. ಈ ಕುಟುಂಬವು ಪಶ್ಚಿಮ ಯುಪಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದೆ.

ಇದನ್ನೂ ಓದಿ: ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಇತ್ತೀಚಿನ ವರ್ಷಗಳಲ್ಲಿ, ಅಜಿತ್ ಸಿಂಗ್ ನೇತೃತ್ವದ ಆರ್‌ಎಲ್‌ಡಿಯ ಜನಪ್ರಿಯತೆ ಇಲ್ಲಿ ಕ್ಷೀಣಿಸಿದ್ದು, ಜಾಟ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಧ್ರುವೀಕರಣವನ್ನು ತೀವ್ರಗೊಳಿಸಿದೆ. ಮತ್ತು ಈ ಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ನೆಲೆ ಒದಗಿಸಿದೆ. ಆದರೆ ಈಗ ಅದು ಛಿದ್ರವಾಗಬಹುದು ಎಂಬ ಅಭಿಪ್ರಾಯಗಳಿವೆ.

ಹರಿಯಾಣದಲ್ಲಿ, ರೈತರ ಅಂದೋಲನ ಬೆಂಬಲಿಸಬೇಕು ಮತ್ತು ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಬೇಕು ಎಂದು ಜೆಜೆಪಿ ಪಕ್ಷವು ದುಷ್ಯಂತ್ ಚೌಟಾಲ ಮೇಲೆ ಒತ್ತಡ ಹಾಕುತ್ತಲೇ ಬಂದಿದೆ. ಇಲ್ಲಿವರೆಗೂ ದುಷ್ಯಂತ್ ಅದನ್ನು ಹೇಗೋ ನಿರ್ವಹಿಸಿಕೊಂಡು ಬಂದಿದ್ದರು. ಅಭಯ್ ಚೌಟಾಲ ರಾಜೀನಾಮೆ ನೀಡಿದ ನಂತರ ಒತ್ತಡದಲ್ಲಿದ್ದ ಅವರನ್ನು ಗುರುವಾರದ ಗಾಜಿಪುರ ಘಟನೆ ಚಿಂತೆಗೀಡು ಮಾಡಿದೆ.

“ದುಶ್ಯಂತ್ ಚೌಟಾಲ ಈಗಾಗಲೇ ತಮ್ಮ ಕೆಲವು ಶಾಸಕರ ನಿಲುವಿನ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಶಾಸಕರು ಕೃಷಿ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಬಯಸುತ್ತಾರೆ. ಈ ಪರಿಸ್ಥಿತಿ ಹದಗೆಟ್ಟರೆ ಅದು ಬಿಜೆಪಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಅದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...