Homeಮುಖಪುಟರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ - ಬಿಜೆಪಿ ನಾಯಕರಲ್ಲಿ ಅಸಮಾಧಾನ

ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

"ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು" ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವು ರೈತ ಪ್ರತಿಭಟನೆಯ ವಿಶ್ವಾಸಾರ್ಹತೆಯನ್ನು ಕುಂದುವಂತೆ ಮಾಡಿತ್ತು. ಗಾಜಿಪುರದಲ್ಲಿ ಕೃಷಿ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೈಗೊಂಡ ಕ್ರಮವು ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಿದೆ” ಎಂದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಆಡಳಿತ ಪಕ್ಷದ ಹಲವಾರು ಹಿರಿಯ ನಾಯಕರು, ಬಿಜೆಪಿ ಸಂಸದರು ತಿಳಿಸಿದ್ದಾರೆ.

ಬಿಕೆಯು ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಹೊರಹಾಕಲು ಗುರುವಾರ ರಾತ್ರಿ ಭಾರಿ ಪೊಲೀಸ್ ನಿಯೋಜನೆ ಮಾಡಿದ್ದು ರೈತರ ಭಾವನೆಗಳನ್ನು ಕೆರಳಿಸಿದೆ. ಅದರಲ್ಲೂ ವಿಶೇಷವಾಗಿ ಜಾಟ್ ಸಮುದಾಯದ ರೈತರು ಆಕ್ರೋಶಗೊಂಡಿದ್ದಾರೆ. ಪಶ್ಚಿಮ ಯುಪಿ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜಾಟ್ ಸಮುದಾಯವು ಗಮನಾರ್ಹ ರಾಜಕೀಯ ಮಹತ್ವವನ್ನು ಹೊಂದಿದೆ.

ಮುಜಫರ್‌ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಶುಕ್ರವಾರ ಭಾರಿ ಜನಸಂದಣಿ ಈ ಮನಸ್ಥಿತಿಯನ್ನು ಪ್ರತಿಬಿಂಬಿಸಿತು. “ಇದು 2013 ರಲ್ಲಿ ಕೋಮು ಗಲಭೆಗೆ ಸಂಬಂಧಿಸಿ ಬಿಜೆಪಿ ನಡೆಸಿದ ಸಭೆಗಿಂತ ದೊಡ್ಡದಾಗಿತ್ತು” ಎಂದು ಪಶ್ಚಿಮ ಯುಪಿಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರತಿಭಟನಾಕಾರರನ್ನು ತೆರವುಗೊಳಿಸುವ ಪೋಲಿಸ್ ನಡೆಯನ್ನು ವಿರೋಧಿಸಿ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿಯ ನಂತರ ಹೊಸದಾಗಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗೆ ಸೇರುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪಶ್ಚಿಮ ಯುಪಿಯ ಬಿಜೆಪಿ ಮುಖಂಡರು, “ಟಿಕಾಯತ್ ಅಳುವ ದೃಶ್ಯಗಳು ಜಾಟ್ ಸಮುದಾಯವನ್ನು ಕಲಕಿದೆ. ನಮ್ಮ ಮಗ ಅಳುತ್ತಿದ್ದಾನೆ, ನಾವು ಹೋಗೋಣ ಮತ್ತು ಬೆಂಬಲಿಸೋಣ ಎಂಬ ಭಾವನೆಯನ್ನು ಮೂಡಿಸಿದೆ. ಇದು ಹಳ್ಳಿಗಳಿಂದ ಅನೇಕರನ್ನು ಪ್ರತಿಭಟನಾ ಸ್ಥಳದ ಕಡೆಗೆ ಮೆರವಣಿಗೆ ಮಾಡಲು ಪ್ರೇರೇಪಿಸಿದೆ” ಎಂದು ಹೇಳಿದ್ದಾರೆ.

ಯುಪಿ ಸರ್ಕಾರ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಿದೆ ಎಂದು ಈ ಪ್ರದೇಶದ ಪಕ್ಷದ ಕೆಲವು ಬಿಜೆಪಿ ಸಂಸದರು ದೂಷಿಸಿದ್ದಾರೆ. “ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನಕ್ಕೆ ಪ್ರಚೋದನೆ ನೀಡಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು. ಯುಪಿ ಸರ್ಕಾರದ ಪೊಲೀಸ್ ಕ್ರಮವು ಪಕ್ಷವನ್ನು ಒಂದು ಅನಿಶ್ಚಿತ ಪರಿಸ್ಥಿತಿಯಲ್ಲಿ ಇರಿಸಿದೆ” ಎಂದು ಬಿಜೆಪಿ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರಿಯಾಣದಲ್ಲಿ, ಪಕ್ಷಾತೀತವಾಗಿ ಹಲವಾರು ಸ್ಥಳೀಯ ಜಾಟ್ ನಾಯಕರು ಟಿಕಾಯತ್ ಅವರನ್ನು ಬೆಂಬಲಿಸಿ ಘಾಜಿಪುರದ ಕಡೆಗೆ ಮೆರವಣಿಗೆ ಆರಂಭಿಸಿದ್ದಾರೆ. ಮತ್ತು ಇತರ ಗಡಿ ಪ್ರತಿಭಟನಾ ತಾಣಗಳಾದ ಸಿಂಘು ಮತ್ತು ಟಿಕ್ರಿ ಗಡಿಗಳತ್ತಲೂ ಹೊರಟಿದ್ದಾರೆ.

“ಐಎನ್‌ಎಲ್‌ಡಿ ಶಾಸಕ ಅಭಯ್ ಚೌಟಾಲ ರೈತರನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಸಂಬಂಧಿ ದುಶ್ಯಂತ್ ಚೌಟಾಲ ಅವರ ಮೇಲೆ ಹೆಚ್ಚಿನ ರಾಜಕೀಯ ಒತ್ತಡವನ್ನು ಉಂಟುಮಾಡಬಹುದು” ಎಂದು ಕೆಲವು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಉಪ ಮುಖ್ಯಮಂತ್ರಿ ದುಷ್ಯಂತ್ ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಪಿಪಿ ಮುಖ್ಯಸ್ಥರಾಗಿದ್ದಾರೆ. ಬಿಜೆಪಿ 90 ಸ್ಥಾನಗಳಲ್ಲಿ 40 ಸ್ಥಾನಗಳನ್ನು ಹೊಂದಿದ್ದು, ದುಶ್ಯಂತ್ ಚೌಟಾಲ್ ಮತ್ತು ಅವರ 10 ಶಾಸಕರು ಅಧಿಕಾರದ ಕೀಲಿಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಹಿಂಸಾಚಾರ ಮತ್ತು ಯುಪಿ ಸರ್ಕಾರದ ತೆರವುಗೊಳಿಸುವ ನಡೆಯನ್ನು ಉಲ್ಲೇಖಿಸಿದ ಬಿಜೆಪಿ ಜನಪ್ರತಿನಿಧಿಯೊಬ್ಬರು, ನಮ್ಮ ಕ್ಷೇತ್ರಗಳಲ್ಲಿನ ಜನರಿಗೆ ನಾವು ಏನು ಹೇಳೋಣ? ಈ ಹಿಂಸಾಚಾರವು ರೈತರ ಐಕ್ಯತೆಯನ್ನು ಮುರಿಯಲು ಮತ್ತು ಚಳವಳಿಯನ್ನು ಕೆಣಕಲು ಸರ್ಕಾರ ನಡೆಸಿದ ಕುತಂತ್ರವಾಗಿದೆ ಎಂದು ಅನೇಕ ನಗರ ಪ್ರದೇಶಗಳಲ್ಲಿ ಜನರು ಹೇಳುತ್ತಿದ್ದಾರೆ. ಗಡಿಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ಏಕೆ ಈ ಕ್ರಮ ಕೈಗೊಳ್ಳಬೇಕಾಯಿತು ಎಂದು ಹಳ್ಳಿಗಳ ಜನರು ಕೇಳುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹರಿಯಾಣ ಬಿಜೆಪಿ ಸಂಸದರೊಬ್ಬರು, “ವಾಸ್ತವದಲ್ಲಿ ಪೊಲೀಸ್ ಕ್ರಮವು ಹರಿಯಾಣದಲ್ಲಿನ ರೈತರ ಆಂದೋಲನವನ್ನು ಇನ್ನಷ್ಟು ಹುರುಪುಗೊಳಿಸಲು ಪ್ರತಿಭಟನಾಕಾರರಿಗೆ ಒಂದು ಅವಕಾಶ ಸಿಕ್ಕಂತಾಗಿದೆ. ಇದು ಇಲ್ಲಿಯವರೆಗೆ ಪಂಜಾಬ್ ಆಂದೋಲನವಾಗಿ ಉಳಿದಿತ್ತು, ಆದರೆ ಈಗ ಅದು ಹಾಗೇ ಉಳಿದಿಲ್ಲ” ಎಂದು ಹೇಳಿದ್ದಾರೆ.

ಟಿಕಾಯತ್ ಅವರ ಮನವಿಯು ಯುಪಿಯ ಶುಗರ್ ಬೆಲ್ಟ್‌ನಲ್ಲಿ ಕುಟುಂಬದ ರಾಜಕೀಯ ಪರಂಪರೆಯಿಂದಾಗಿ ವಿಶೇಷ ಮಹತ್ವ ಹೊಂದಿದೆ. ದಿವಂಗತ ಮಹೇಂದ್ರ ಸಿಂಗ್ ಟಿಕಾಯತ್ ಪಶ್ಚಿಮ ಯುಪಿಯಲ್ಲಿ ಕಟ್ಟಿದ ರೈತ ಚಳವಳಿ ಇದಕ್ಕೆ ಕಾರಣವಾಗಿದೆ. ಈ ಕುಟುಂಬವು ಪಶ್ಚಿಮ ಯುಪಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದೆ.

ಇದನ್ನೂ ಓದಿ: ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಇತ್ತೀಚಿನ ವರ್ಷಗಳಲ್ಲಿ, ಅಜಿತ್ ಸಿಂಗ್ ನೇತೃತ್ವದ ಆರ್‌ಎಲ್‌ಡಿಯ ಜನಪ್ರಿಯತೆ ಇಲ್ಲಿ ಕ್ಷೀಣಿಸಿದ್ದು, ಜಾಟ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಧ್ರುವೀಕರಣವನ್ನು ತೀವ್ರಗೊಳಿಸಿದೆ. ಮತ್ತು ಈ ಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ನೆಲೆ ಒದಗಿಸಿದೆ. ಆದರೆ ಈಗ ಅದು ಛಿದ್ರವಾಗಬಹುದು ಎಂಬ ಅಭಿಪ್ರಾಯಗಳಿವೆ.

ಹರಿಯಾಣದಲ್ಲಿ, ರೈತರ ಅಂದೋಲನ ಬೆಂಬಲಿಸಬೇಕು ಮತ್ತು ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಬೇಕು ಎಂದು ಜೆಜೆಪಿ ಪಕ್ಷವು ದುಷ್ಯಂತ್ ಚೌಟಾಲ ಮೇಲೆ ಒತ್ತಡ ಹಾಕುತ್ತಲೇ ಬಂದಿದೆ. ಇಲ್ಲಿವರೆಗೂ ದುಷ್ಯಂತ್ ಅದನ್ನು ಹೇಗೋ ನಿರ್ವಹಿಸಿಕೊಂಡು ಬಂದಿದ್ದರು. ಅಭಯ್ ಚೌಟಾಲ ರಾಜೀನಾಮೆ ನೀಡಿದ ನಂತರ ಒತ್ತಡದಲ್ಲಿದ್ದ ಅವರನ್ನು ಗುರುವಾರದ ಗಾಜಿಪುರ ಘಟನೆ ಚಿಂತೆಗೀಡು ಮಾಡಿದೆ.

“ದುಶ್ಯಂತ್ ಚೌಟಾಲ ಈಗಾಗಲೇ ತಮ್ಮ ಕೆಲವು ಶಾಸಕರ ನಿಲುವಿನ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಶಾಸಕರು ಕೃಷಿ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಬಯಸುತ್ತಾರೆ. ಈ ಪರಿಸ್ಥಿತಿ ಹದಗೆಟ್ಟರೆ ಅದು ಬಿಜೆಪಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಅದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...