Homeಮುಖಪುಟರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ - ಬಿಜೆಪಿ ನಾಯಕರಲ್ಲಿ ಅಸಮಾಧಾನ

ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

"ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು" ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವು ರೈತ ಪ್ರತಿಭಟನೆಯ ವಿಶ್ವಾಸಾರ್ಹತೆಯನ್ನು ಕುಂದುವಂತೆ ಮಾಡಿತ್ತು. ಗಾಜಿಪುರದಲ್ಲಿ ಕೃಷಿ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೈಗೊಂಡ ಕ್ರಮವು ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಿದೆ” ಎಂದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಆಡಳಿತ ಪಕ್ಷದ ಹಲವಾರು ಹಿರಿಯ ನಾಯಕರು, ಬಿಜೆಪಿ ಸಂಸದರು ತಿಳಿಸಿದ್ದಾರೆ.

ಬಿಕೆಯು ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಹೊರಹಾಕಲು ಗುರುವಾರ ರಾತ್ರಿ ಭಾರಿ ಪೊಲೀಸ್ ನಿಯೋಜನೆ ಮಾಡಿದ್ದು ರೈತರ ಭಾವನೆಗಳನ್ನು ಕೆರಳಿಸಿದೆ. ಅದರಲ್ಲೂ ವಿಶೇಷವಾಗಿ ಜಾಟ್ ಸಮುದಾಯದ ರೈತರು ಆಕ್ರೋಶಗೊಂಡಿದ್ದಾರೆ. ಪಶ್ಚಿಮ ಯುಪಿ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜಾಟ್ ಸಮುದಾಯವು ಗಮನಾರ್ಹ ರಾಜಕೀಯ ಮಹತ್ವವನ್ನು ಹೊಂದಿದೆ.

ಮುಜಫರ್‌ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಶುಕ್ರವಾರ ಭಾರಿ ಜನಸಂದಣಿ ಈ ಮನಸ್ಥಿತಿಯನ್ನು ಪ್ರತಿಬಿಂಬಿಸಿತು. “ಇದು 2013 ರಲ್ಲಿ ಕೋಮು ಗಲಭೆಗೆ ಸಂಬಂಧಿಸಿ ಬಿಜೆಪಿ ನಡೆಸಿದ ಸಭೆಗಿಂತ ದೊಡ್ಡದಾಗಿತ್ತು” ಎಂದು ಪಶ್ಚಿಮ ಯುಪಿಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರತಿಭಟನಾಕಾರರನ್ನು ತೆರವುಗೊಳಿಸುವ ಪೋಲಿಸ್ ನಡೆಯನ್ನು ವಿರೋಧಿಸಿ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿಯ ನಂತರ ಹೊಸದಾಗಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗೆ ಸೇರುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪಶ್ಚಿಮ ಯುಪಿಯ ಬಿಜೆಪಿ ಮುಖಂಡರು, “ಟಿಕಾಯತ್ ಅಳುವ ದೃಶ್ಯಗಳು ಜಾಟ್ ಸಮುದಾಯವನ್ನು ಕಲಕಿದೆ. ನಮ್ಮ ಮಗ ಅಳುತ್ತಿದ್ದಾನೆ, ನಾವು ಹೋಗೋಣ ಮತ್ತು ಬೆಂಬಲಿಸೋಣ ಎಂಬ ಭಾವನೆಯನ್ನು ಮೂಡಿಸಿದೆ. ಇದು ಹಳ್ಳಿಗಳಿಂದ ಅನೇಕರನ್ನು ಪ್ರತಿಭಟನಾ ಸ್ಥಳದ ಕಡೆಗೆ ಮೆರವಣಿಗೆ ಮಾಡಲು ಪ್ರೇರೇಪಿಸಿದೆ” ಎಂದು ಹೇಳಿದ್ದಾರೆ.

ಯುಪಿ ಸರ್ಕಾರ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಿದೆ ಎಂದು ಈ ಪ್ರದೇಶದ ಪಕ್ಷದ ಕೆಲವು ಬಿಜೆಪಿ ಸಂಸದರು ದೂಷಿಸಿದ್ದಾರೆ. “ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನಕ್ಕೆ ಪ್ರಚೋದನೆ ನೀಡಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು. ಯುಪಿ ಸರ್ಕಾರದ ಪೊಲೀಸ್ ಕ್ರಮವು ಪಕ್ಷವನ್ನು ಒಂದು ಅನಿಶ್ಚಿತ ಪರಿಸ್ಥಿತಿಯಲ್ಲಿ ಇರಿಸಿದೆ” ಎಂದು ಬಿಜೆಪಿ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರಿಯಾಣದಲ್ಲಿ, ಪಕ್ಷಾತೀತವಾಗಿ ಹಲವಾರು ಸ್ಥಳೀಯ ಜಾಟ್ ನಾಯಕರು ಟಿಕಾಯತ್ ಅವರನ್ನು ಬೆಂಬಲಿಸಿ ಘಾಜಿಪುರದ ಕಡೆಗೆ ಮೆರವಣಿಗೆ ಆರಂಭಿಸಿದ್ದಾರೆ. ಮತ್ತು ಇತರ ಗಡಿ ಪ್ರತಿಭಟನಾ ತಾಣಗಳಾದ ಸಿಂಘು ಮತ್ತು ಟಿಕ್ರಿ ಗಡಿಗಳತ್ತಲೂ ಹೊರಟಿದ್ದಾರೆ.

“ಐಎನ್‌ಎಲ್‌ಡಿ ಶಾಸಕ ಅಭಯ್ ಚೌಟಾಲ ರೈತರನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಸಂಬಂಧಿ ದುಶ್ಯಂತ್ ಚೌಟಾಲ ಅವರ ಮೇಲೆ ಹೆಚ್ಚಿನ ರಾಜಕೀಯ ಒತ್ತಡವನ್ನು ಉಂಟುಮಾಡಬಹುದು” ಎಂದು ಕೆಲವು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಉಪ ಮುಖ್ಯಮಂತ್ರಿ ದುಷ್ಯಂತ್ ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಪಿಪಿ ಮುಖ್ಯಸ್ಥರಾಗಿದ್ದಾರೆ. ಬಿಜೆಪಿ 90 ಸ್ಥಾನಗಳಲ್ಲಿ 40 ಸ್ಥಾನಗಳನ್ನು ಹೊಂದಿದ್ದು, ದುಶ್ಯಂತ್ ಚೌಟಾಲ್ ಮತ್ತು ಅವರ 10 ಶಾಸಕರು ಅಧಿಕಾರದ ಕೀಲಿಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಹಿಂಸಾಚಾರ ಮತ್ತು ಯುಪಿ ಸರ್ಕಾರದ ತೆರವುಗೊಳಿಸುವ ನಡೆಯನ್ನು ಉಲ್ಲೇಖಿಸಿದ ಬಿಜೆಪಿ ಜನಪ್ರತಿನಿಧಿಯೊಬ್ಬರು, ನಮ್ಮ ಕ್ಷೇತ್ರಗಳಲ್ಲಿನ ಜನರಿಗೆ ನಾವು ಏನು ಹೇಳೋಣ? ಈ ಹಿಂಸಾಚಾರವು ರೈತರ ಐಕ್ಯತೆಯನ್ನು ಮುರಿಯಲು ಮತ್ತು ಚಳವಳಿಯನ್ನು ಕೆಣಕಲು ಸರ್ಕಾರ ನಡೆಸಿದ ಕುತಂತ್ರವಾಗಿದೆ ಎಂದು ಅನೇಕ ನಗರ ಪ್ರದೇಶಗಳಲ್ಲಿ ಜನರು ಹೇಳುತ್ತಿದ್ದಾರೆ. ಗಡಿಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ಏಕೆ ಈ ಕ್ರಮ ಕೈಗೊಳ್ಳಬೇಕಾಯಿತು ಎಂದು ಹಳ್ಳಿಗಳ ಜನರು ಕೇಳುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹರಿಯಾಣ ಬಿಜೆಪಿ ಸಂಸದರೊಬ್ಬರು, “ವಾಸ್ತವದಲ್ಲಿ ಪೊಲೀಸ್ ಕ್ರಮವು ಹರಿಯಾಣದಲ್ಲಿನ ರೈತರ ಆಂದೋಲನವನ್ನು ಇನ್ನಷ್ಟು ಹುರುಪುಗೊಳಿಸಲು ಪ್ರತಿಭಟನಾಕಾರರಿಗೆ ಒಂದು ಅವಕಾಶ ಸಿಕ್ಕಂತಾಗಿದೆ. ಇದು ಇಲ್ಲಿಯವರೆಗೆ ಪಂಜಾಬ್ ಆಂದೋಲನವಾಗಿ ಉಳಿದಿತ್ತು, ಆದರೆ ಈಗ ಅದು ಹಾಗೇ ಉಳಿದಿಲ್ಲ” ಎಂದು ಹೇಳಿದ್ದಾರೆ.

ಟಿಕಾಯತ್ ಅವರ ಮನವಿಯು ಯುಪಿಯ ಶುಗರ್ ಬೆಲ್ಟ್‌ನಲ್ಲಿ ಕುಟುಂಬದ ರಾಜಕೀಯ ಪರಂಪರೆಯಿಂದಾಗಿ ವಿಶೇಷ ಮಹತ್ವ ಹೊಂದಿದೆ. ದಿವಂಗತ ಮಹೇಂದ್ರ ಸಿಂಗ್ ಟಿಕಾಯತ್ ಪಶ್ಚಿಮ ಯುಪಿಯಲ್ಲಿ ಕಟ್ಟಿದ ರೈತ ಚಳವಳಿ ಇದಕ್ಕೆ ಕಾರಣವಾಗಿದೆ. ಈ ಕುಟುಂಬವು ಪಶ್ಚಿಮ ಯುಪಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದೆ.

ಇದನ್ನೂ ಓದಿ: ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಇತ್ತೀಚಿನ ವರ್ಷಗಳಲ್ಲಿ, ಅಜಿತ್ ಸಿಂಗ್ ನೇತೃತ್ವದ ಆರ್‌ಎಲ್‌ಡಿಯ ಜನಪ್ರಿಯತೆ ಇಲ್ಲಿ ಕ್ಷೀಣಿಸಿದ್ದು, ಜಾಟ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಧ್ರುವೀಕರಣವನ್ನು ತೀವ್ರಗೊಳಿಸಿದೆ. ಮತ್ತು ಈ ಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ನೆಲೆ ಒದಗಿಸಿದೆ. ಆದರೆ ಈಗ ಅದು ಛಿದ್ರವಾಗಬಹುದು ಎಂಬ ಅಭಿಪ್ರಾಯಗಳಿವೆ.

ಹರಿಯಾಣದಲ್ಲಿ, ರೈತರ ಅಂದೋಲನ ಬೆಂಬಲಿಸಬೇಕು ಮತ್ತು ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಬೇಕು ಎಂದು ಜೆಜೆಪಿ ಪಕ್ಷವು ದುಷ್ಯಂತ್ ಚೌಟಾಲ ಮೇಲೆ ಒತ್ತಡ ಹಾಕುತ್ತಲೇ ಬಂದಿದೆ. ಇಲ್ಲಿವರೆಗೂ ದುಷ್ಯಂತ್ ಅದನ್ನು ಹೇಗೋ ನಿರ್ವಹಿಸಿಕೊಂಡು ಬಂದಿದ್ದರು. ಅಭಯ್ ಚೌಟಾಲ ರಾಜೀನಾಮೆ ನೀಡಿದ ನಂತರ ಒತ್ತಡದಲ್ಲಿದ್ದ ಅವರನ್ನು ಗುರುವಾರದ ಗಾಜಿಪುರ ಘಟನೆ ಚಿಂತೆಗೀಡು ಮಾಡಿದೆ.

“ದುಶ್ಯಂತ್ ಚೌಟಾಲ ಈಗಾಗಲೇ ತಮ್ಮ ಕೆಲವು ಶಾಸಕರ ನಿಲುವಿನ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಶಾಸಕರು ಕೃಷಿ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಬಯಸುತ್ತಾರೆ. ಈ ಪರಿಸ್ಥಿತಿ ಹದಗೆಟ್ಟರೆ ಅದು ಬಿಜೆಪಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಅದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್‌ಗೆ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....