Homeಮುಖಪುಟರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ - ಬಿಜೆಪಿ ನಾಯಕರಲ್ಲಿ ಅಸಮಾಧಾನ

ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

"ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು" ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವು ರೈತ ಪ್ರತಿಭಟನೆಯ ವಿಶ್ವಾಸಾರ್ಹತೆಯನ್ನು ಕುಂದುವಂತೆ ಮಾಡಿತ್ತು. ಗಾಜಿಪುರದಲ್ಲಿ ಕೃಷಿ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೈಗೊಂಡ ಕ್ರಮವು ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಿದೆ” ಎಂದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಆಡಳಿತ ಪಕ್ಷದ ಹಲವಾರು ಹಿರಿಯ ನಾಯಕರು, ಬಿಜೆಪಿ ಸಂಸದರು ತಿಳಿಸಿದ್ದಾರೆ.

ಬಿಕೆಯು ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಹೊರಹಾಕಲು ಗುರುವಾರ ರಾತ್ರಿ ಭಾರಿ ಪೊಲೀಸ್ ನಿಯೋಜನೆ ಮಾಡಿದ್ದು ರೈತರ ಭಾವನೆಗಳನ್ನು ಕೆರಳಿಸಿದೆ. ಅದರಲ್ಲೂ ವಿಶೇಷವಾಗಿ ಜಾಟ್ ಸಮುದಾಯದ ರೈತರು ಆಕ್ರೋಶಗೊಂಡಿದ್ದಾರೆ. ಪಶ್ಚಿಮ ಯುಪಿ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜಾಟ್ ಸಮುದಾಯವು ಗಮನಾರ್ಹ ರಾಜಕೀಯ ಮಹತ್ವವನ್ನು ಹೊಂದಿದೆ.

ಮುಜಫರ್‌ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಶುಕ್ರವಾರ ಭಾರಿ ಜನಸಂದಣಿ ಈ ಮನಸ್ಥಿತಿಯನ್ನು ಪ್ರತಿಬಿಂಬಿಸಿತು. “ಇದು 2013 ರಲ್ಲಿ ಕೋಮು ಗಲಭೆಗೆ ಸಂಬಂಧಿಸಿ ಬಿಜೆಪಿ ನಡೆಸಿದ ಸಭೆಗಿಂತ ದೊಡ್ಡದಾಗಿತ್ತು” ಎಂದು ಪಶ್ಚಿಮ ಯುಪಿಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರತಿಭಟನಾಕಾರರನ್ನು ತೆರವುಗೊಳಿಸುವ ಪೋಲಿಸ್ ನಡೆಯನ್ನು ವಿರೋಧಿಸಿ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿಯ ನಂತರ ಹೊಸದಾಗಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗೆ ಸೇರುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪಶ್ಚಿಮ ಯುಪಿಯ ಬಿಜೆಪಿ ಮುಖಂಡರು, “ಟಿಕಾಯತ್ ಅಳುವ ದೃಶ್ಯಗಳು ಜಾಟ್ ಸಮುದಾಯವನ್ನು ಕಲಕಿದೆ. ನಮ್ಮ ಮಗ ಅಳುತ್ತಿದ್ದಾನೆ, ನಾವು ಹೋಗೋಣ ಮತ್ತು ಬೆಂಬಲಿಸೋಣ ಎಂಬ ಭಾವನೆಯನ್ನು ಮೂಡಿಸಿದೆ. ಇದು ಹಳ್ಳಿಗಳಿಂದ ಅನೇಕರನ್ನು ಪ್ರತಿಭಟನಾ ಸ್ಥಳದ ಕಡೆಗೆ ಮೆರವಣಿಗೆ ಮಾಡಲು ಪ್ರೇರೇಪಿಸಿದೆ” ಎಂದು ಹೇಳಿದ್ದಾರೆ.

ಯುಪಿ ಸರ್ಕಾರ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಿದೆ ಎಂದು ಈ ಪ್ರದೇಶದ ಪಕ್ಷದ ಕೆಲವು ಬಿಜೆಪಿ ಸಂಸದರು ದೂಷಿಸಿದ್ದಾರೆ. “ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನಕ್ಕೆ ಪ್ರಚೋದನೆ ನೀಡಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು. ಯುಪಿ ಸರ್ಕಾರದ ಪೊಲೀಸ್ ಕ್ರಮವು ಪಕ್ಷವನ್ನು ಒಂದು ಅನಿಶ್ಚಿತ ಪರಿಸ್ಥಿತಿಯಲ್ಲಿ ಇರಿಸಿದೆ” ಎಂದು ಬಿಜೆಪಿ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರಿಯಾಣದಲ್ಲಿ, ಪಕ್ಷಾತೀತವಾಗಿ ಹಲವಾರು ಸ್ಥಳೀಯ ಜಾಟ್ ನಾಯಕರು ಟಿಕಾಯತ್ ಅವರನ್ನು ಬೆಂಬಲಿಸಿ ಘಾಜಿಪುರದ ಕಡೆಗೆ ಮೆರವಣಿಗೆ ಆರಂಭಿಸಿದ್ದಾರೆ. ಮತ್ತು ಇತರ ಗಡಿ ಪ್ರತಿಭಟನಾ ತಾಣಗಳಾದ ಸಿಂಘು ಮತ್ತು ಟಿಕ್ರಿ ಗಡಿಗಳತ್ತಲೂ ಹೊರಟಿದ್ದಾರೆ.

“ಐಎನ್‌ಎಲ್‌ಡಿ ಶಾಸಕ ಅಭಯ್ ಚೌಟಾಲ ರೈತರನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಸಂಬಂಧಿ ದುಶ್ಯಂತ್ ಚೌಟಾಲ ಅವರ ಮೇಲೆ ಹೆಚ್ಚಿನ ರಾಜಕೀಯ ಒತ್ತಡವನ್ನು ಉಂಟುಮಾಡಬಹುದು” ಎಂದು ಕೆಲವು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಉಪ ಮುಖ್ಯಮಂತ್ರಿ ದುಷ್ಯಂತ್ ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಪಿಪಿ ಮುಖ್ಯಸ್ಥರಾಗಿದ್ದಾರೆ. ಬಿಜೆಪಿ 90 ಸ್ಥಾನಗಳಲ್ಲಿ 40 ಸ್ಥಾನಗಳನ್ನು ಹೊಂದಿದ್ದು, ದುಶ್ಯಂತ್ ಚೌಟಾಲ್ ಮತ್ತು ಅವರ 10 ಶಾಸಕರು ಅಧಿಕಾರದ ಕೀಲಿಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಹಿಂಸಾಚಾರ ಮತ್ತು ಯುಪಿ ಸರ್ಕಾರದ ತೆರವುಗೊಳಿಸುವ ನಡೆಯನ್ನು ಉಲ್ಲೇಖಿಸಿದ ಬಿಜೆಪಿ ಜನಪ್ರತಿನಿಧಿಯೊಬ್ಬರು, ನಮ್ಮ ಕ್ಷೇತ್ರಗಳಲ್ಲಿನ ಜನರಿಗೆ ನಾವು ಏನು ಹೇಳೋಣ? ಈ ಹಿಂಸಾಚಾರವು ರೈತರ ಐಕ್ಯತೆಯನ್ನು ಮುರಿಯಲು ಮತ್ತು ಚಳವಳಿಯನ್ನು ಕೆಣಕಲು ಸರ್ಕಾರ ನಡೆಸಿದ ಕುತಂತ್ರವಾಗಿದೆ ಎಂದು ಅನೇಕ ನಗರ ಪ್ರದೇಶಗಳಲ್ಲಿ ಜನರು ಹೇಳುತ್ತಿದ್ದಾರೆ. ಗಡಿಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ಏಕೆ ಈ ಕ್ರಮ ಕೈಗೊಳ್ಳಬೇಕಾಯಿತು ಎಂದು ಹಳ್ಳಿಗಳ ಜನರು ಕೇಳುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹರಿಯಾಣ ಬಿಜೆಪಿ ಸಂಸದರೊಬ್ಬರು, “ವಾಸ್ತವದಲ್ಲಿ ಪೊಲೀಸ್ ಕ್ರಮವು ಹರಿಯಾಣದಲ್ಲಿನ ರೈತರ ಆಂದೋಲನವನ್ನು ಇನ್ನಷ್ಟು ಹುರುಪುಗೊಳಿಸಲು ಪ್ರತಿಭಟನಾಕಾರರಿಗೆ ಒಂದು ಅವಕಾಶ ಸಿಕ್ಕಂತಾಗಿದೆ. ಇದು ಇಲ್ಲಿಯವರೆಗೆ ಪಂಜಾಬ್ ಆಂದೋಲನವಾಗಿ ಉಳಿದಿತ್ತು, ಆದರೆ ಈಗ ಅದು ಹಾಗೇ ಉಳಿದಿಲ್ಲ” ಎಂದು ಹೇಳಿದ್ದಾರೆ.

ಟಿಕಾಯತ್ ಅವರ ಮನವಿಯು ಯುಪಿಯ ಶುಗರ್ ಬೆಲ್ಟ್‌ನಲ್ಲಿ ಕುಟುಂಬದ ರಾಜಕೀಯ ಪರಂಪರೆಯಿಂದಾಗಿ ವಿಶೇಷ ಮಹತ್ವ ಹೊಂದಿದೆ. ದಿವಂಗತ ಮಹೇಂದ್ರ ಸಿಂಗ್ ಟಿಕಾಯತ್ ಪಶ್ಚಿಮ ಯುಪಿಯಲ್ಲಿ ಕಟ್ಟಿದ ರೈತ ಚಳವಳಿ ಇದಕ್ಕೆ ಕಾರಣವಾಗಿದೆ. ಈ ಕುಟುಂಬವು ಪಶ್ಚಿಮ ಯುಪಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದೆ.

ಇದನ್ನೂ ಓದಿ: ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಇತ್ತೀಚಿನ ವರ್ಷಗಳಲ್ಲಿ, ಅಜಿತ್ ಸಿಂಗ್ ನೇತೃತ್ವದ ಆರ್‌ಎಲ್‌ಡಿಯ ಜನಪ್ರಿಯತೆ ಇಲ್ಲಿ ಕ್ಷೀಣಿಸಿದ್ದು, ಜಾಟ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಧ್ರುವೀಕರಣವನ್ನು ತೀವ್ರಗೊಳಿಸಿದೆ. ಮತ್ತು ಈ ಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ನೆಲೆ ಒದಗಿಸಿದೆ. ಆದರೆ ಈಗ ಅದು ಛಿದ್ರವಾಗಬಹುದು ಎಂಬ ಅಭಿಪ್ರಾಯಗಳಿವೆ.

ಹರಿಯಾಣದಲ್ಲಿ, ರೈತರ ಅಂದೋಲನ ಬೆಂಬಲಿಸಬೇಕು ಮತ್ತು ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಬೇಕು ಎಂದು ಜೆಜೆಪಿ ಪಕ್ಷವು ದುಷ್ಯಂತ್ ಚೌಟಾಲ ಮೇಲೆ ಒತ್ತಡ ಹಾಕುತ್ತಲೇ ಬಂದಿದೆ. ಇಲ್ಲಿವರೆಗೂ ದುಷ್ಯಂತ್ ಅದನ್ನು ಹೇಗೋ ನಿರ್ವಹಿಸಿಕೊಂಡು ಬಂದಿದ್ದರು. ಅಭಯ್ ಚೌಟಾಲ ರಾಜೀನಾಮೆ ನೀಡಿದ ನಂತರ ಒತ್ತಡದಲ್ಲಿದ್ದ ಅವರನ್ನು ಗುರುವಾರದ ಗಾಜಿಪುರ ಘಟನೆ ಚಿಂತೆಗೀಡು ಮಾಡಿದೆ.

“ದುಶ್ಯಂತ್ ಚೌಟಾಲ ಈಗಾಗಲೇ ತಮ್ಮ ಕೆಲವು ಶಾಸಕರ ನಿಲುವಿನ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಶಾಸಕರು ಕೃಷಿ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಬಯಸುತ್ತಾರೆ. ಈ ಪರಿಸ್ಥಿತಿ ಹದಗೆಟ್ಟರೆ ಅದು ಬಿಜೆಪಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಅದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...