Homeಮುಖಪುಟರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ - ಬಿಜೆಪಿ ನಾಯಕರಲ್ಲಿ ಅಸಮಾಧಾನ

ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

"ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು" ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವು ರೈತ ಪ್ರತಿಭಟನೆಯ ವಿಶ್ವಾಸಾರ್ಹತೆಯನ್ನು ಕುಂದುವಂತೆ ಮಾಡಿತ್ತು. ಗಾಜಿಪುರದಲ್ಲಿ ಕೃಷಿ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೈಗೊಂಡ ಕ್ರಮವು ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಮತ್ತಷ್ಟು ಚುರುಕುಗೊಳಿಸಿದೆ” ಎಂದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಆಡಳಿತ ಪಕ್ಷದ ಹಲವಾರು ಹಿರಿಯ ನಾಯಕರು, ಬಿಜೆಪಿ ಸಂಸದರು ತಿಳಿಸಿದ್ದಾರೆ.

ಬಿಕೆಯು ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಹೊರಹಾಕಲು ಗುರುವಾರ ರಾತ್ರಿ ಭಾರಿ ಪೊಲೀಸ್ ನಿಯೋಜನೆ ಮಾಡಿದ್ದು ರೈತರ ಭಾವನೆಗಳನ್ನು ಕೆರಳಿಸಿದೆ. ಅದರಲ್ಲೂ ವಿಶೇಷವಾಗಿ ಜಾಟ್ ಸಮುದಾಯದ ರೈತರು ಆಕ್ರೋಶಗೊಂಡಿದ್ದಾರೆ. ಪಶ್ಚಿಮ ಯುಪಿ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜಾಟ್ ಸಮುದಾಯವು ಗಮನಾರ್ಹ ರಾಜಕೀಯ ಮಹತ್ವವನ್ನು ಹೊಂದಿದೆ.

ಮುಜಫರ್‌ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಶುಕ್ರವಾರ ಭಾರಿ ಜನಸಂದಣಿ ಈ ಮನಸ್ಥಿತಿಯನ್ನು ಪ್ರತಿಬಿಂಬಿಸಿತು. “ಇದು 2013 ರಲ್ಲಿ ಕೋಮು ಗಲಭೆಗೆ ಸಂಬಂಧಿಸಿ ಬಿಜೆಪಿ ನಡೆಸಿದ ಸಭೆಗಿಂತ ದೊಡ್ಡದಾಗಿತ್ತು” ಎಂದು ಪಶ್ಚಿಮ ಯುಪಿಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರತಿಭಟನಾಕಾರರನ್ನು ತೆರವುಗೊಳಿಸುವ ಪೋಲಿಸ್ ನಡೆಯನ್ನು ವಿರೋಧಿಸಿ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿಯ ನಂತರ ಹೊಸದಾಗಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗೆ ಸೇರುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಪಶ್ಚಿಮ ಯುಪಿಯ ಬಿಜೆಪಿ ಮುಖಂಡರು, “ಟಿಕಾಯತ್ ಅಳುವ ದೃಶ್ಯಗಳು ಜಾಟ್ ಸಮುದಾಯವನ್ನು ಕಲಕಿದೆ. ನಮ್ಮ ಮಗ ಅಳುತ್ತಿದ್ದಾನೆ, ನಾವು ಹೋಗೋಣ ಮತ್ತು ಬೆಂಬಲಿಸೋಣ ಎಂಬ ಭಾವನೆಯನ್ನು ಮೂಡಿಸಿದೆ. ಇದು ಹಳ್ಳಿಗಳಿಂದ ಅನೇಕರನ್ನು ಪ್ರತಿಭಟನಾ ಸ್ಥಳದ ಕಡೆಗೆ ಮೆರವಣಿಗೆ ಮಾಡಲು ಪ್ರೇರೇಪಿಸಿದೆ” ಎಂದು ಹೇಳಿದ್ದಾರೆ.

ಯುಪಿ ಸರ್ಕಾರ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಿದೆ ಎಂದು ಈ ಪ್ರದೇಶದ ಪಕ್ಷದ ಕೆಲವು ಬಿಜೆಪಿ ಸಂಸದರು ದೂಷಿಸಿದ್ದಾರೆ. “ಯುಪಿ ಸರ್ಕಾರದ ಈ ಕ್ರಮವು ಹರಿಯಾಣದ ಅನೇಕ ಭಾಗಗಳಲ್ಲಿನ ಆಂದೋಲನಕ್ಕೆ ಪ್ರಚೋದನೆ ನೀಡಬಹುದು ಮತ್ತು ಪಶ್ಚಿಮ ಯುಪಿಯನ್ನು ಮತ್ತೊಂದು ಪ್ರತಿಭಟನಾ ಕೇಂದ್ರವನ್ನಾಗಿ ಪರಿವರ್ತಿಸಬಹುದು. ಯುಪಿ ಸರ್ಕಾರದ ಪೊಲೀಸ್ ಕ್ರಮವು ಪಕ್ಷವನ್ನು ಒಂದು ಅನಿಶ್ಚಿತ ಪರಿಸ್ಥಿತಿಯಲ್ಲಿ ಇರಿಸಿದೆ” ಎಂದು ಬಿಜೆಪಿ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರಿಯಾಣದಲ್ಲಿ, ಪಕ್ಷಾತೀತವಾಗಿ ಹಲವಾರು ಸ್ಥಳೀಯ ಜಾಟ್ ನಾಯಕರು ಟಿಕಾಯತ್ ಅವರನ್ನು ಬೆಂಬಲಿಸಿ ಘಾಜಿಪುರದ ಕಡೆಗೆ ಮೆರವಣಿಗೆ ಆರಂಭಿಸಿದ್ದಾರೆ. ಮತ್ತು ಇತರ ಗಡಿ ಪ್ರತಿಭಟನಾ ತಾಣಗಳಾದ ಸಿಂಘು ಮತ್ತು ಟಿಕ್ರಿ ಗಡಿಗಳತ್ತಲೂ ಹೊರಟಿದ್ದಾರೆ.

“ಐಎನ್‌ಎಲ್‌ಡಿ ಶಾಸಕ ಅಭಯ್ ಚೌಟಾಲ ರೈತರನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಸಂಬಂಧಿ ದುಶ್ಯಂತ್ ಚೌಟಾಲ ಅವರ ಮೇಲೆ ಹೆಚ್ಚಿನ ರಾಜಕೀಯ ಒತ್ತಡವನ್ನು ಉಂಟುಮಾಡಬಹುದು” ಎಂದು ಕೆಲವು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಉಪ ಮುಖ್ಯಮಂತ್ರಿ ದುಷ್ಯಂತ್ ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಪಿಪಿ ಮುಖ್ಯಸ್ಥರಾಗಿದ್ದಾರೆ. ಬಿಜೆಪಿ 90 ಸ್ಥಾನಗಳಲ್ಲಿ 40 ಸ್ಥಾನಗಳನ್ನು ಹೊಂದಿದ್ದು, ದುಶ್ಯಂತ್ ಚೌಟಾಲ್ ಮತ್ತು ಅವರ 10 ಶಾಸಕರು ಅಧಿಕಾರದ ಕೀಲಿಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಹಿಂಸಾಚಾರ ಮತ್ತು ಯುಪಿ ಸರ್ಕಾರದ ತೆರವುಗೊಳಿಸುವ ನಡೆಯನ್ನು ಉಲ್ಲೇಖಿಸಿದ ಬಿಜೆಪಿ ಜನಪ್ರತಿನಿಧಿಯೊಬ್ಬರು, ನಮ್ಮ ಕ್ಷೇತ್ರಗಳಲ್ಲಿನ ಜನರಿಗೆ ನಾವು ಏನು ಹೇಳೋಣ? ಈ ಹಿಂಸಾಚಾರವು ರೈತರ ಐಕ್ಯತೆಯನ್ನು ಮುರಿಯಲು ಮತ್ತು ಚಳವಳಿಯನ್ನು ಕೆಣಕಲು ಸರ್ಕಾರ ನಡೆಸಿದ ಕುತಂತ್ರವಾಗಿದೆ ಎಂದು ಅನೇಕ ನಗರ ಪ್ರದೇಶಗಳಲ್ಲಿ ಜನರು ಹೇಳುತ್ತಿದ್ದಾರೆ. ಗಡಿಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ಏಕೆ ಈ ಕ್ರಮ ಕೈಗೊಳ್ಳಬೇಕಾಯಿತು ಎಂದು ಹಳ್ಳಿಗಳ ಜನರು ಕೇಳುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹರಿಯಾಣ ಬಿಜೆಪಿ ಸಂಸದರೊಬ್ಬರು, “ವಾಸ್ತವದಲ್ಲಿ ಪೊಲೀಸ್ ಕ್ರಮವು ಹರಿಯಾಣದಲ್ಲಿನ ರೈತರ ಆಂದೋಲನವನ್ನು ಇನ್ನಷ್ಟು ಹುರುಪುಗೊಳಿಸಲು ಪ್ರತಿಭಟನಾಕಾರರಿಗೆ ಒಂದು ಅವಕಾಶ ಸಿಕ್ಕಂತಾಗಿದೆ. ಇದು ಇಲ್ಲಿಯವರೆಗೆ ಪಂಜಾಬ್ ಆಂದೋಲನವಾಗಿ ಉಳಿದಿತ್ತು, ಆದರೆ ಈಗ ಅದು ಹಾಗೇ ಉಳಿದಿಲ್ಲ” ಎಂದು ಹೇಳಿದ್ದಾರೆ.

ಟಿಕಾಯತ್ ಅವರ ಮನವಿಯು ಯುಪಿಯ ಶುಗರ್ ಬೆಲ್ಟ್‌ನಲ್ಲಿ ಕುಟುಂಬದ ರಾಜಕೀಯ ಪರಂಪರೆಯಿಂದಾಗಿ ವಿಶೇಷ ಮಹತ್ವ ಹೊಂದಿದೆ. ದಿವಂಗತ ಮಹೇಂದ್ರ ಸಿಂಗ್ ಟಿಕಾಯತ್ ಪಶ್ಚಿಮ ಯುಪಿಯಲ್ಲಿ ಕಟ್ಟಿದ ರೈತ ಚಳವಳಿ ಇದಕ್ಕೆ ಕಾರಣವಾಗಿದೆ. ಈ ಕುಟುಂಬವು ಪಶ್ಚಿಮ ಯುಪಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದೆ.

ಇದನ್ನೂ ಓದಿ: ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಇತ್ತೀಚಿನ ವರ್ಷಗಳಲ್ಲಿ, ಅಜಿತ್ ಸಿಂಗ್ ನೇತೃತ್ವದ ಆರ್‌ಎಲ್‌ಡಿಯ ಜನಪ್ರಿಯತೆ ಇಲ್ಲಿ ಕ್ಷೀಣಿಸಿದ್ದು, ಜಾಟ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಧ್ರುವೀಕರಣವನ್ನು ತೀವ್ರಗೊಳಿಸಿದೆ. ಮತ್ತು ಈ ಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ನೆಲೆ ಒದಗಿಸಿದೆ. ಆದರೆ ಈಗ ಅದು ಛಿದ್ರವಾಗಬಹುದು ಎಂಬ ಅಭಿಪ್ರಾಯಗಳಿವೆ.

ಹರಿಯಾಣದಲ್ಲಿ, ರೈತರ ಅಂದೋಲನ ಬೆಂಬಲಿಸಬೇಕು ಮತ್ತು ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಬೇಕು ಎಂದು ಜೆಜೆಪಿ ಪಕ್ಷವು ದುಷ್ಯಂತ್ ಚೌಟಾಲ ಮೇಲೆ ಒತ್ತಡ ಹಾಕುತ್ತಲೇ ಬಂದಿದೆ. ಇಲ್ಲಿವರೆಗೂ ದುಷ್ಯಂತ್ ಅದನ್ನು ಹೇಗೋ ನಿರ್ವಹಿಸಿಕೊಂಡು ಬಂದಿದ್ದರು. ಅಭಯ್ ಚೌಟಾಲ ರಾಜೀನಾಮೆ ನೀಡಿದ ನಂತರ ಒತ್ತಡದಲ್ಲಿದ್ದ ಅವರನ್ನು ಗುರುವಾರದ ಗಾಜಿಪುರ ಘಟನೆ ಚಿಂತೆಗೀಡು ಮಾಡಿದೆ.

“ದುಶ್ಯಂತ್ ಚೌಟಾಲ ಈಗಾಗಲೇ ತಮ್ಮ ಕೆಲವು ಶಾಸಕರ ನಿಲುವಿನ ಬಗ್ಗೆ ಚಿಂತಿತರಾಗಿದ್ದಾರೆ. ಅವರ ಶಾಸಕರು ಕೃಷಿ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಬಯಸುತ್ತಾರೆ. ಈ ಪರಿಸ್ಥಿತಿ ಹದಗೆಟ್ಟರೆ ಅದು ಬಿಜೆಪಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಅದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...