Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...