Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...