Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...