Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....