Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...