Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...