Homeಚಳವಳಿರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ಸಾವಿರಾರು ಸಂಖ್ಯೆಯಲ್ಲಿ ರೈತರು ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

- Advertisement -
- Advertisement -

ಜನವರಿ 26 ರಂದು ರೈತ ಗಣರಾಜ್ಯೋತ್ಸವದ ಟ್ರಾಕ್ಟರ್ ರ್‍ಯಾಲಿಯಲ್ಲಿ ನಡೆದ ಅಹಿತಕರ ಘಟನೆ ನಂತರ ದೆಹಲಿಯ ಎಲ್ಲಾ ಪ್ರತಿಭಟನಾ ಸ್ಥಳಗಳಿಗೆ ಹೋಗುವ ಗಡಿ ಮಾರ್ಗಗಳನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದರು. ಗಡಿಗಳಲ್ಲಿನ ಎಲ್ಲಾ ಸಂಚಾರ ಮಾರ್ಗಗಳನ್ನು ಮುಚ್ಚಿ, ಪರ್ಯಾಯ ಮಾರ್ಗಗಳನ್ನು ಒದಗಿಸಲಾಗಿತ್ತು.

ಒಂದು ತಿಂಗಳ ನಂತರ ಪ್ರತಿಭಟನಾ ಸ್ಥಳವಾದ ಗಾಜಿಪುರ ಗಡಿಯ ಮೂಲಕ ದೆಹಲಿಯಿಂದ ಗಾಜಿಯಾಬಾದ್‌ಗೆ ವಾಹನ ಸಂಚಾರವನ್ನು ಸೋಮವಾರ ಸಂಜೆಯಿಂದ ಭಾಗಶಃ ಆರಂಭಿಸಲಾಗಿದೆ. ಜನವರಿ 26 ರಂದು ನಡೆದ ಘಟನೆಗೆ ರೈತರು ಕಾರಣ ಎಂದು ಪೊಲೀಸರು ಚಿಲ್ಲಾ ಗಡಿ ಭಾಗದಲ್ಲಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ಖಾಲಿ ಮಾಡಿಸಿದ್ದರು.

ಗಾಜಿಪುರ್ ಗಡಿ ಭಾಗದಲ್ಲಿಯು ಪೊಲೀಸರು ಪ್ರತಿಭಟನನಾಕಾರರನ್ನು ಚದುರಿಸಲು ಮಾಡಿದ ಯೋಜನೆ ಅವರಿಗೆ ತಿರುಗುಬಾಣವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದರಿಂದ, ರೈತರು ಸಾವಿರಾರು ಸಂಖ್ಯೆಯಲ್ಲಿ ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಪೋಲಿಸರು ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ತುರ್ತು ಸಂದರ್ಭಗಳಲ್ಲಿ ತುರ್ತು ವಾಹನಗಳು ಮತ್ತು ವಾಹನ ಚಾಲಕರಿಗೆ ಮಾತ್ರ ಒಂದು ಮಾರ್ಗದಲ್ಲಿ (ದೆಹಲಿಯಿಂದ ಗಾಜಿಯಾಬಾದ್‌ಗೆ) ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಮೊದಲೇ ಆಂಬುಲೆನ್ಸ್‌ಗಳ ಸಂಚಾರಕ್ಕೆ ಸಹಕರಿಸುತ್ತಿದ್ದೆವು. ಈಗ, ನಾವು ಈ ಮಾರ್ಗವನ್ನು ಭಾಗಶಃ ತೆರೆದಿದ್ದೇವೆ ಮತ್ತು ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿರುವ ವಾಹನ ಚಾಲಕರಿಗೆ ಅವಕಾಶ ನೀಡಿದ್ದೇವೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿ ಮತ್ತೆ ಪರಿಶೀಲಿಸಲಾಗುವುದು.  ಯಾವುದೇ ಸಮಸ್ಯೆಗಳು ಎದುರಾದರೆ, ನಾವು ಮತ್ತೆ ಮಾರ್ಗವನ್ನು ಮುಚ್ಚುತ್ತೇವೆ” ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರನ್ನು ಹಿಂದೂಸ್ತಾನ್ ಟೈಮ್ಸ್ ಉಲ್ಲೆಖಿಸಿ ವರದಿ ಮಾಡಿದೆ.

ಕಳೆದ 97 ದಿನಗಳಿಂದ ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ನಾಲ್ಕು ಪ್ರಮುಖ ಗಡಿಗಳಲ್ಲಿ ಗಾಜಿಪುರ ಗಡಿಯೂ ಈಗ ಪ್ರಮುಖವಾಗಿದೆ. ರೈತ ಹೋರಾಟದ ಆರಂಭದಲ್ಲಿ, ಗಾಜಿಯಾಬಾದ್‌ನಿಂದ ದೆಹಲಿ ಕಡೆಗೆ ಹೋಗುವ ಸಂಚಾರ ಮಾರ್ಗಗಳನ್ನು ಮಾತ್ರ ಮುಚ್ಚಲಾಗಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...