Homeಚಳವಳಿರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ಸಾವಿರಾರು ಸಂಖ್ಯೆಯಲ್ಲಿ ರೈತರು ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

- Advertisement -
- Advertisement -

ಜನವರಿ 26 ರಂದು ರೈತ ಗಣರಾಜ್ಯೋತ್ಸವದ ಟ್ರಾಕ್ಟರ್ ರ್‍ಯಾಲಿಯಲ್ಲಿ ನಡೆದ ಅಹಿತಕರ ಘಟನೆ ನಂತರ ದೆಹಲಿಯ ಎಲ್ಲಾ ಪ್ರತಿಭಟನಾ ಸ್ಥಳಗಳಿಗೆ ಹೋಗುವ ಗಡಿ ಮಾರ್ಗಗಳನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದರು. ಗಡಿಗಳಲ್ಲಿನ ಎಲ್ಲಾ ಸಂಚಾರ ಮಾರ್ಗಗಳನ್ನು ಮುಚ್ಚಿ, ಪರ್ಯಾಯ ಮಾರ್ಗಗಳನ್ನು ಒದಗಿಸಲಾಗಿತ್ತು.

ಒಂದು ತಿಂಗಳ ನಂತರ ಪ್ರತಿಭಟನಾ ಸ್ಥಳವಾದ ಗಾಜಿಪುರ ಗಡಿಯ ಮೂಲಕ ದೆಹಲಿಯಿಂದ ಗಾಜಿಯಾಬಾದ್‌ಗೆ ವಾಹನ ಸಂಚಾರವನ್ನು ಸೋಮವಾರ ಸಂಜೆಯಿಂದ ಭಾಗಶಃ ಆರಂಭಿಸಲಾಗಿದೆ. ಜನವರಿ 26 ರಂದು ನಡೆದ ಘಟನೆಗೆ ರೈತರು ಕಾರಣ ಎಂದು ಪೊಲೀಸರು ಚಿಲ್ಲಾ ಗಡಿ ಭಾಗದಲ್ಲಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ಖಾಲಿ ಮಾಡಿಸಿದ್ದರು.

ಗಾಜಿಪುರ್ ಗಡಿ ಭಾಗದಲ್ಲಿಯು ಪೊಲೀಸರು ಪ್ರತಿಭಟನನಾಕಾರರನ್ನು ಚದುರಿಸಲು ಮಾಡಿದ ಯೋಜನೆ ಅವರಿಗೆ ತಿರುಗುಬಾಣವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದರಿಂದ, ರೈತರು ಸಾವಿರಾರು ಸಂಖ್ಯೆಯಲ್ಲಿ ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಪೋಲಿಸರು ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ತುರ್ತು ಸಂದರ್ಭಗಳಲ್ಲಿ ತುರ್ತು ವಾಹನಗಳು ಮತ್ತು ವಾಹನ ಚಾಲಕರಿಗೆ ಮಾತ್ರ ಒಂದು ಮಾರ್ಗದಲ್ಲಿ (ದೆಹಲಿಯಿಂದ ಗಾಜಿಯಾಬಾದ್‌ಗೆ) ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಮೊದಲೇ ಆಂಬುಲೆನ್ಸ್‌ಗಳ ಸಂಚಾರಕ್ಕೆ ಸಹಕರಿಸುತ್ತಿದ್ದೆವು. ಈಗ, ನಾವು ಈ ಮಾರ್ಗವನ್ನು ಭಾಗಶಃ ತೆರೆದಿದ್ದೇವೆ ಮತ್ತು ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿರುವ ವಾಹನ ಚಾಲಕರಿಗೆ ಅವಕಾಶ ನೀಡಿದ್ದೇವೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿ ಮತ್ತೆ ಪರಿಶೀಲಿಸಲಾಗುವುದು.  ಯಾವುದೇ ಸಮಸ್ಯೆಗಳು ಎದುರಾದರೆ, ನಾವು ಮತ್ತೆ ಮಾರ್ಗವನ್ನು ಮುಚ್ಚುತ್ತೇವೆ” ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರನ್ನು ಹಿಂದೂಸ್ತಾನ್ ಟೈಮ್ಸ್ ಉಲ್ಲೆಖಿಸಿ ವರದಿ ಮಾಡಿದೆ.

ಕಳೆದ 97 ದಿನಗಳಿಂದ ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ನಾಲ್ಕು ಪ್ರಮುಖ ಗಡಿಗಳಲ್ಲಿ ಗಾಜಿಪುರ ಗಡಿಯೂ ಈಗ ಪ್ರಮುಖವಾಗಿದೆ. ರೈತ ಹೋರಾಟದ ಆರಂಭದಲ್ಲಿ, ಗಾಜಿಯಾಬಾದ್‌ನಿಂದ ದೆಹಲಿ ಕಡೆಗೆ ಹೋಗುವ ಸಂಚಾರ ಮಾರ್ಗಗಳನ್ನು ಮಾತ್ರ ಮುಚ್ಚಲಾಗಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...