Homeಚಳವಳಿರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ಸಾವಿರಾರು ಸಂಖ್ಯೆಯಲ್ಲಿ ರೈತರು ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

- Advertisement -
- Advertisement -

ಜನವರಿ 26 ರಂದು ರೈತ ಗಣರಾಜ್ಯೋತ್ಸವದ ಟ್ರಾಕ್ಟರ್ ರ್‍ಯಾಲಿಯಲ್ಲಿ ನಡೆದ ಅಹಿತಕರ ಘಟನೆ ನಂತರ ದೆಹಲಿಯ ಎಲ್ಲಾ ಪ್ರತಿಭಟನಾ ಸ್ಥಳಗಳಿಗೆ ಹೋಗುವ ಗಡಿ ಮಾರ್ಗಗಳನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದರು. ಗಡಿಗಳಲ್ಲಿನ ಎಲ್ಲಾ ಸಂಚಾರ ಮಾರ್ಗಗಳನ್ನು ಮುಚ್ಚಿ, ಪರ್ಯಾಯ ಮಾರ್ಗಗಳನ್ನು ಒದಗಿಸಲಾಗಿತ್ತು.

ಒಂದು ತಿಂಗಳ ನಂತರ ಪ್ರತಿಭಟನಾ ಸ್ಥಳವಾದ ಗಾಜಿಪುರ ಗಡಿಯ ಮೂಲಕ ದೆಹಲಿಯಿಂದ ಗಾಜಿಯಾಬಾದ್‌ಗೆ ವಾಹನ ಸಂಚಾರವನ್ನು ಸೋಮವಾರ ಸಂಜೆಯಿಂದ ಭಾಗಶಃ ಆರಂಭಿಸಲಾಗಿದೆ. ಜನವರಿ 26 ರಂದು ನಡೆದ ಘಟನೆಗೆ ರೈತರು ಕಾರಣ ಎಂದು ಪೊಲೀಸರು ಚಿಲ್ಲಾ ಗಡಿ ಭಾಗದಲ್ಲಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ಖಾಲಿ ಮಾಡಿಸಿದ್ದರು.

ಗಾಜಿಪುರ್ ಗಡಿ ಭಾಗದಲ್ಲಿಯು ಪೊಲೀಸರು ಪ್ರತಿಭಟನನಾಕಾರರನ್ನು ಚದುರಿಸಲು ಮಾಡಿದ ಯೋಜನೆ ಅವರಿಗೆ ತಿರುಗುಬಾಣವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದರಿಂದ, ರೈತರು ಸಾವಿರಾರು ಸಂಖ್ಯೆಯಲ್ಲಿ ಗಾಜಿಪುರ್‌ ಗಡಿಯಲ್ಲಿ ಜಮಾಯಿಸಲು ಶುರು ಮಾಡಿದ್ದರಿಂದ ದೆಹಲಿ ಪೋಲಿಸರು ಮತ್ತು ಉತ್ತರ ಪ್ರದೇಶ ಪೊಲೀಸರು ಗಡಿಗಳನ್ನು ಬಂದ್ ಮಾಡಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ತುರ್ತು ಸಂದರ್ಭಗಳಲ್ಲಿ ತುರ್ತು ವಾಹನಗಳು ಮತ್ತು ವಾಹನ ಚಾಲಕರಿಗೆ ಮಾತ್ರ ಒಂದು ಮಾರ್ಗದಲ್ಲಿ (ದೆಹಲಿಯಿಂದ ಗಾಜಿಯಾಬಾದ್‌ಗೆ) ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಮೊದಲೇ ಆಂಬುಲೆನ್ಸ್‌ಗಳ ಸಂಚಾರಕ್ಕೆ ಸಹಕರಿಸುತ್ತಿದ್ದೆವು. ಈಗ, ನಾವು ಈ ಮಾರ್ಗವನ್ನು ಭಾಗಶಃ ತೆರೆದಿದ್ದೇವೆ ಮತ್ತು ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿರುವ ವಾಹನ ಚಾಲಕರಿಗೆ ಅವಕಾಶ ನೀಡಿದ್ದೇವೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿ ಮತ್ತೆ ಪರಿಶೀಲಿಸಲಾಗುವುದು.  ಯಾವುದೇ ಸಮಸ್ಯೆಗಳು ಎದುರಾದರೆ, ನಾವು ಮತ್ತೆ ಮಾರ್ಗವನ್ನು ಮುಚ್ಚುತ್ತೇವೆ” ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರನ್ನು ಹಿಂದೂಸ್ತಾನ್ ಟೈಮ್ಸ್ ಉಲ್ಲೆಖಿಸಿ ವರದಿ ಮಾಡಿದೆ.

ಕಳೆದ 97 ದಿನಗಳಿಂದ ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ನಾಲ್ಕು ಪ್ರಮುಖ ಗಡಿಗಳಲ್ಲಿ ಗಾಜಿಪುರ ಗಡಿಯೂ ಈಗ ಪ್ರಮುಖವಾಗಿದೆ. ರೈತ ಹೋರಾಟದ ಆರಂಭದಲ್ಲಿ, ಗಾಜಿಯಾಬಾದ್‌ನಿಂದ ದೆಹಲಿ ಕಡೆಗೆ ಹೋಗುವ ಸಂಚಾರ ಮಾರ್ಗಗಳನ್ನು ಮಾತ್ರ ಮುಚ್ಚಲಾಗಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...