Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...