Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...