Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ...