Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...