Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...