Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...