Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...