Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...