Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...