Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...