Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...