Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...