Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...