Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...