Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....