Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...