Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...