Homeಚಳವಳಿಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ 'ಎಂಎಸ್‌ಪಿ ದಿಲಾವ್' ಆಂದೋಲನವನ್ನು ಪ್ರಾರಂಭಿಸಲಾಗುವುದು. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲು ಮಾತನಾಡಿದ ರೈತ ಮುಖಂಡ, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್, ನಾವು ಮಾರ್ಚ್ 15ರ ವರೆಗಿನ ಕಾರ್ಯಕ್ರಮಗಳನ್ನು ಅಂತಿಮಗೊಳಿಸಿದ್ದೇವೆ ಎಂದು ಕಾರ್ಯಕ್ರಮದ ವಿವರಗಳನ್ನು ನೀಡಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ಮಾತನಾಡಿ, ’ಬಿಜೆಪಿಗೆ ಚುನಾವಣಾ ಭಾಷೆಯೊಂದೇ ಅರ್ಥವಾಗುವುದು. ಹಾಗಾಗಿ ನಾವು ಈ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತೇವೆ. ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಿಗೆ ನಮ್ಮ ತಂಡಗಳನ್ನು ಕಳುಹಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

’ನಾವು ಯಾವುದೇ ಪಕ್ಷವನ್ನು ಬೆಂಬಲಿಸಿ ಅಭಿಯಾನ ಮಾಡುವುದಿಲ್ಲ. ಆದರೆ ಬಿಜೆಪಿಯನ್ನು ಸೋಲಿಸಬಲ್ಲ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡುತ್ತೇವೆ. ರೈತರ ಬಗ್ಗೆ ಮೋದಿ ಸರ್ಕಾರದ ವರ್ತನೆ ಬಗ್ಗೆ ನಾವು ಜನರಿಗೆ ವಿವರಿಸಿ ಹೇಳುತ್ತೇವೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ತಿಳಿಸಿದ್ದಾರೆ.

“ಈ ವಿಧಾನಸಭಾ ಚುನಾವಣೆಯಲ್ಲಿ, ರೈತ ವಿರೋಧಿ ಕಾನೂನುಗಳನ್ನು ತಂದ ಬಿಜೆಪಿ ಮತ್ತು ಅದರ ಮಿತ್ರರಾಷ್ಟ್ರಗಳಿಗೆ ಶಿಕ್ಷೆ ವಿಧಿಸುವಂತೆ ನಾವು ಜನರಲ್ಲಿ ಮನವಿ ಮಾಡುತ್ತೇವೆ. ನಾವು ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೋಗುತ್ತೇವೆ. ಈ ಅಭಿಯಾನ ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯೊಂದಿಗೆ ಪ್ರಾರಂಭವಾಗಲಿದೆ’ ಎಂದು ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಮಾರ್ಚ್ 6 ರಂದು ರೈತ ಹೋರಾಟವು 100 ನೇ ದಿನಕ್ಕೆ ಕಾಲಿಡುತ್ತಿದೆ. ಅಂದು ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಕಾರ್ಮಿಕ ಸಂಘಗಳು ರೈತ ಮುಖಂಡರನ್ನು ಭೇಟಿಯಾಗಿದ್ದು, ಮಾರ್ಚ್ 15 ರಂದು 10 ಕಾರ್ಮಿಕ ಸಂಘಗಳು ಪ್ರತಿಭಟನೆ ನಡೆಸಲಿದ್ದಾರೆ. ರೈತರು ಮತ್ತು ಕಾರ್ಮಿಕರು ಒಗ್ಗೂಡಬೇಕು ಎಂದು ಅವರು ನಿರ್ಧರಿಸಿದ್ದಾರೆ. ಹೀಗಾಗಿ ಈ ಪ್ರತಿಭಟನೆಗೆ ರೈತರು ಬೆಂಬಲ ನೀಡಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ

ಮಾರ್ಚ್ 8 ರಂದು ಸಂಯುಕ್ತ ಕಿಸಾನ್ ಮೋರ್ಚಾ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳಾ ಕಿಸಾನ್ ದಿವಾಸ್ ಎಂದು ಗುರುತಿಸುತ್ತದೆ. ದೇಶಾದ್ಯಂತದ ಎಲ್ಲಾ ಎಸ್‌ಕೆಎಂ ಪ್ರತಿಭಟನಾ ತಾಣಗಳು ಆ ದಿನದಂದು ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿವೆ. ಅಂದು ಮಹಿಳೆಯರೇ ವೇದಿಕೆಯ ಎಲ್ಲಾ ಹಂತಗಳನ್ನು ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಬೆಂಬಲಿಸಲು ಮತ್ತು ಮಹಿಳಾ ರೈತರು ದೇಶಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಲು ಮಹಿಳಾ ಸಂಘಟನೆಗಳನ್ನು ಮತ್ತು ಇತರರನ್ನು ಆಹ್ವಾನಿಸುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....